ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,
ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು ಎನ್ನಲಾಗಿದೆ. ಆ ಮೂಲಕ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ.

ನೆಲಮಂಗಲ, ಸೆಪ್ಟೆಂಬರ್ 22:
ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ. ಸಂಬಂಧಿಸಿದಂತೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಪರಸಂಗದ ಪೀಕಲಾಟಕ್ಕೆ ಮಹಿಳೆ ಕೊಲೆಯಾದಳಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸದ್ಯ ಈ ಪ್ರಕರಣ ಪೊಲೀಸರಿಗೆ ಚಾಲೆಂಜಿಂಗ್ ಆಗಿದೆ. ಇದರ ಮಧ್ಯೆ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪದೇಪದೆ ಗಂಡನಿಗೆ ಕಿರುಕುಳ
ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು. ಹೇಮಂತ್ ದಾಸ್ನ ಎದೆ ಹಾಗೂ ಹೊಟ್ಟೆಗೆ ಕಚ್ಚುತ್ತಿದ್ದಳು. ಹಣದ ವಿಚಾರಕ್ಕೆ, ದಾಂಪತ್ಯದಲ್ಲಿ ಖುಷಿ ಇಲ್ಲವೆಂದು ಪದೇಪದೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ಬೇಸತ್ತ ಪತಿ ಹೇಮಂತ್ 2023ರ ಡಿಸೆಂಬರ್ 1ರಂದು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಇಡೀ ದಿನ ರಾಜಿ ಪಂಚಾಯಿತಿ ನಡೆಸಲಾಗಿತ್ತು.