ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಮೂವರು ಸಾವು, ಪ್ರಾಣ ಉಳಿಸಲು ಹೋಗಿ ಓರ್ವ ಬಲಿ

ಚಿಕ್ಕೋಡಿ: ಭೀಕರ ಅರಣಿ ಅಪಘಾತಕ್ಕೆ (Accident0 ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಅಥಣಿ ಹೊರವಲಯದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ರೆ, ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದರಲ್ಲಿ ಪ್ರಾಣ ಉಳಿಸಲು ಹೋಗಿ ಓರ್ವ ಬಲಿಯಾಗಿದ್ದಾನೆ.
ಬೆಳಗಾವಿಯ ಚಿಕ್ಕೋಡಿಯಲ್ಲಿ ಈ ಭೀಕರ ಸರಣಿ ಅಪಘಾತ ಸಂಭವಿಸಿದೆ. ವಿಜಯಪುರ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತ ನಡೆದು ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹೌದು, ಅಥಣಿ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಹಸುನೀಗಿದ್ದಾರೆ. ಪ್ರಾಣ ಉಳಿಸಲು ಹೋಗಿ ಓರ್ವ ಪ್ರಾಣ ಕಳೆದುಕೊಂಡಿದ್ರೆ, ಈ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ವಿಜಯಪುರ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಸರಣಿ ಅಪಘಾತ ಸಂಭವಿಸಿದೆ. ಲಾರಿ, ಪಿಕಪ್ ವಾಹನ, ಸ್ಕಾರ್ಪಿಯೋ ಹಾಗೂ ಎರ್ಟಿಗಾ ಕಾರಿನ ನಡುವೆ ಅಪಘಾತವಾಗಿದೆ.
ಮೂವರಿಗೆ ಗಂಭೀಯ ಗಾಯ, ಆಸ್ಪತ್ರೆಗೆ ರವಾನೆ!
ಈ ಭೀಕರ ಸರಣಿ ಅಪಘಾತದಲ್ಲಿ ಮಹೇಶ ಗಾತಾಡೆ (30), ಶಿವಮ್ ಚೌಹಾನ್ (24) ಹಾಗೂ ಸಚಿನ ಮಾಳಿ (40) ಎಂಬುವವರು ಸಾವನಪ್ಪಿದ್ದಾರೆ. ಅಪಘಾತದಲ್ಲಿ ಮೃತ ಪಟ್ಟ ಇವರು ಮಹಾರಾಷ್ಟ್ರದ ಮಿರಜ್ ಹಾಗೂ ಕೊಲ್ಲಾಪುರ ಮೂಲದವರಾಗಿದ್ದಾರೆ. ಇನ್ನು ಇದರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರ ಜೀವನ ಉಳಿಸಲು ಬಂದವನೇ ಬಲಿಯಾದ!
ಮೊದಲಿಗೆ ಪಿಕಪ್ ವಾಹನ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ಹೊಡೆತಕ್ಕೆ ಪಿಕಪ್ ವಾಹನ ನೆಲ ಕಚ್ಚಿದೆ. ಪಿಕಪ್ ವಾಹನದ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದರು. ಈ ವೇಳೆ ಸ್ಕಾರ್ಪಿಯೋದಲ್ಲಿದ್ದ ಚಾಲಕ ಇಬ್ಬರ ಸಹಾಯಕ್ಕೆ ಬಂದಿದ್ದಾರೆ. ಆದರೆ ವಿಧಿಯಾಟ ಬೇರೆಯೇ ಇತ್ತು.
ಸ್ಕಾರ್ಪಿಯೋದಲ್ಲಿದ್ದ ಚಾಲಕ ವಾಹನ ಪಕ್ಕಕ್ಕೆ ಹಾಕಿ ರಸ್ತೆ ದಾಟುವಾಗ ಜೋರಾಗಿ ಬಂದ ಎರ್ಟಿಗಾ ಕಾರು ಆತನಿಗೆ ಡಿಕ್ಕಿ ಹೊಡೆದಿದೆ. ಸಹಾಯಕ್ಕೆ ಬಂದಿದ್ದ ಡ್ರೈವರ್ ಗೆ ಡಿಕ್ಕಿ ಹೊಡೆದು ಎರ್ಟಿಗಾ ಕಾರು ಲಾರಿಗೆ ಅಪ್ಪಳಿಸಿದೆ.
ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವು!
ಇದಾದ ನಂತರ ಅಪಘಾತದ ರಭಸಕ್ಕೆ ಎರ್ಟಿಗಾ ಕಾರಿನಲ್ಲಿದ್ದ ಇಬ್ಬರು ಹಾಗೂ ಸ್ಕಾರ್ಪಿಯೋ ಚಾಲಕ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನೂ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಪೊಲೀಸರು ಈ ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!
ಇತ್ತ ಪ್ರಾಣ ಉಳಿಸಲು ಬಂದ ಓರ್ವ ಚಾಲಕ ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಘಾತದಲ್ಲಿ ಸಾವನಪ್ಪಿದ್ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ನಂತರ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ.