ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ 41 ಅಭ್ಯರ್ಥಿಗಳು: ಉದ್ಯಯ ಎಸ್. ಕೋಟ್ಯಾನ್ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ಕಾರ್ಕಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಎ. 26ರಂದು ಚುನವಣಾ ನಿಗದಿಯಾಗಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್ ಬೆಂಬಲಿತರು ಸೇರಿದಂತೆ ಒಟ್ಟು 41 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಎರಡು ಜಿಲ್ಲೆಗಳಲ್ಲಿ ತಲಾ 8 ಸೇರಿದಂತೆ ಒಟ್ಟು 16 ಸ್ಥಾನಗಳಿಗೆ ಎ. 26ರಂದು ಪೂರ್ವಾಹ್ನ 9ರಿಂದ ಅಪರಾಹ್ನ 4ರವರೆಗೆ ಒಕ್ಕೂಟದ ಕಚೇರಿಯ ಆವರಣದಲ್ಲಿ ಚುನಾವಣೆ ನಡೆಯಲಿದೆ. ಅದೇ ದಿನದಂದು ಮತ ಎಣಿಕೆ ಕಾರ್ಯ ನಡೆದು ಚುನಾವಣಾಧಿಕಾರಿಯವರು ಚುನಾವಣಾ ಫಲಿತಾಂಶ ಘೋಷಣೆ ಮಾಡಲಿದ್ದಾರೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಕಾರ್ಕಳ ತಾಲೂಕು ಅಭ್ಯರ್ಥಿಗಳು
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಕಾರ್ಕಳ ತಾಲೂಕಿನಿಂದ ಕಾಂತಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಮೋಹನ್ ದಾಸ್ ಅಡ್ಯಂತಾಯ ಹಾಗೂ ಹೆಬ್ರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಭೋಜ ಪೂಜಾರಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಇರ್ವತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಉದಯ್ ಎಸ್. ಕೋಟ್ಯಾನ್ ಹಾಗೂ ಮುಡಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸುಧಾಕರ್ ಶೆಟ್ಟಿ ಮುಡಾರು ಅವರು ಕಣದಲ್ಲಿದ್ದಾರೆ. ಈ ಹಿಂದೆ ಬಿಜೆಪಿ ಬೆಂಬಲಿತ ಸಾಣೂರು ನರಸಿಂಹ ಕಾಮತ್, ಬೋಳ ಸದಾಶಿವ ಶೆಟ್ಟಿ, ಸ್ಮಿತಾ ಆರ್. ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಸುಧಾಕರ್ ಶೆಟ್ಟಿ ಅವರು ಕೆಎಂಎಫ್
ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದು ಸ್ಮಿತಾ ಆರ್ ಶೆಟ್ಟಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ.
ಮತದಾರರು
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರನ್ನು ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರುಗಳು ಮತದಾನ ಮಾಡುವ ಮೂಲಕ ಆಯ್ಕೆ ಮಾಡುತ್ತಾರೆ. ಕಾರ್ಕಳ ಹೆಬ್ರಿಯ 76 ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 325 ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ ಚಲಾಯಿಸಲಿದ್ದಾರೆ.
ಪಕ್ಷದಿಂದ ಉಚ್ಚಾಟನೆ
ಉದಯ ಎಸ್. ಕೋಟ್ಯಾನ್ ಕಾಂಗ್ರೆಸ್ ಅಭ್ಯರ್ಥಿಯಾಗಿ, ಪಕ್ಷದ ವಿರುದ್ಧವಾಗಿ ಸ್ಪರ್ಧಿಸುತ್ತಿರುವ ಕಾರಣದಿಂದಾಗಿ ಜಿಲ್ಲಾ ಕಾರ್ಯದರ್ಶಿ ಸ್ಥಾನದಿಂದ ಉದಯ ಎಸ್ ಕೋಟ್ಯಾನ್ ಅವರನ್ನು ವಜಾಗೊಳಿಸಲಾಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಕಿಶೋರ್ ಕುಮಾರ್ ತಿಳಿಸಿದ್ದಾರೆ.