ಭೋವಿ ನಿಗಮದಲ್ಲಿ 60% ಕಮಿಷನ್ ದಂಧೆ: ಜೆಡಿಎಸ್ ಸರ್ಕಾರ ವಿರುದ್ಧ ಆಕ್ರೋಶ

ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಸಾಕ್ಷಿ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರಹಾಕಿದೆ.

ಭೋವಿ ನಿಗಮದ ಅಕ್ರಮದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕೂಡಲೇ ಭೋವಿ ನಿಗಮದ ಅಧ್ಯಕ್ಷನ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಎಕ್ಸ್ನಲ್ಲಿ ಏನಿದೆ?
60% ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ. ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾನೆ.ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ ಎಸ್ಸಿಎಸ್ಪಿ/ಟಿಎಸ್ಪಿ ನಿಧಿಯಲ್ಲಿನ ಸಾವಿರಾರು ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕಾಂಗ್ರೆಸ್, ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಜೆಡಿಎಸ್ ಕಿಡಿಕಾರಿದೆ.
