Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭದ್ರಾದ್ರಿಯಲ್ಲಿ 64 ಮಾವೋವಾದಿಗಳ ಶರಣಾಗತಿ – ಶಾಂತಿಯ ಮಾರ್ಗಕ್ಕೆ ತಿರುಗುಮುಖ

Spread the love

ಹೈದರಾಬಾದ್: ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 64 ಸದಸ್ಯರು ತೆಲಂಗಾಣದ ಭದ್ರಾದ್ರಿ ಕೊಠಗುಡಂ ಜಿಲ್ಲಾ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ.
ಛತ್ತೀಸಗಢ ಮತ್ತು ತೆಲಂಗಾಣದ ಗಡಿ ಗ್ರಾಮಗಳ ಪ್ರದೇಶ ಸಮಿತಿ ಸದಸ್ಯ ಸೇರಿದಂತೆ ವಿವಿಧ ಕೇಡರ್‌ಗಳಿಗೆ ಸೇರಿದ 64 ಮಂದಿ ಮಾವೋವಾದಿಗಳು ನಕ್ಸಲ್‌ವಾದದ ಹಾದಿಯನ್ನು ತ್ಯಜಿಸಿ ತಮ್ಮ ಕುಟುಂಬಗಳೊಂದಿಗೆ ಶಾಂತಿಯುತ ಜೀವನವನ್ನು ನಡೆಸಲು ತೀರ್ಮಾನಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು 64 ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ. ಈ ಮೂಲಕ ಕಳೆದ ಎರಡೂವರೆ ತಿಂಗಳಿನಲ್ಲಿ ಒಟ್ಟು 122 ಮಾವೋವಾದಿಗಳು ಶರಣಾಗಿದ್ದಾರೆ. ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷವು ಹಳೆಯ ಸಿದ್ಧಾಂತವನ್ನು ಅನುಸರಿಸುತ್ತಿದೆ ಮತ್ತು ಬುಡಕಟ್ಟು ಜನರ ನಂಬಿಕೆ ಮತ್ತು ಬೆಂಬಲವನ್ನು ಕಳೆದುಕೊಂಡಿದೆ ಎಂದು ಶರಣಾದ ಉಗ್ರರು ಅರಿತುಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ಶರಣಾಗಲು ಮತ್ತು ಸಾಮಾನ್ಯ ಜೀವನ ನಡೆಸಲು ಬಯಸುವ ಮಾವೋವಾದಿಗಳು ತಮ್ಮ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಅಧಿಕಾರಿಗಳನ್ನು ತಮ್ಮ ಕುಟುಂಬ ಸದಸ್ಯರ ಮೂಲಕ ಅಥವಾ ನೇರವಾಗಿ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *