ವಿನಾಯಕ ಬಾಳಿಗ ಕೊಲೆಗೆ 9 ವರ್ಷದಿಂದ ನ್ಯಾಯ ಸಿಗದೆ ದೇಶ ಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ಹೋರಾಟ.

ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗರವರ ಹತ್ಯೆಯಾಗಿ 9 ವರ್ಷ ಕಳೆದರೂ ಇನ್ನೂ ನ್ಯಾಯ ಮರೀಚಿಕೆಯಾಗಿದ್ದು ಆಧಾರ ಸ್ತಂಭವನ್ನೇ ಕಳೆದುಕೊಂಡ ಮನೆಯವರು ಕಂಗಾಲಾಗಿದ್ದಾರೆ.

ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಯಾವುದೇ ರೀತಿಯ ನ್ಯಾಯ/ ಪರಿಹಾರ ಕೊಡಲು ವಿಫಲವಾದಾಗ ಹುಟ್ಟಿಕೊಂಡಂತಹ ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ಛಲ ಬಿಡದೆ ನ್ಯಾಯಕ್ಕಾಗಿ ಹೋರಾಟ ಮಾಡುವಂತಹ ಈ ಒಕ್ಕೂಟವು ಇಂದು ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಸೇರಿ ಪ್ರತಿಭಟನೆಯನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ತಕ್ಷಣ ಮಧ್ಯ ಪ್ರವೇಶಿಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ.