Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವೇದಿಕೆಯಲ್ಲಿ ಸಿಟ್ಟಿನಲ್ಲಿ ಎಎಸ್‌ಪಿ ಮೇಲೆ ಎತ್ತಿದ ಸಿಎಂ ಸಿದ್ದರಾಮಯ್ಯ

Spread the love

ಬೆಳಗಾವಿ :ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಸಿಟ್ಟಿನಿಂದ ಕೈ ಎತ್ತಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವೇದಿಕೆ ಮೇಲೆಯೇ ಅಧಿಕಾರಿ ಮೇಲೆ ದರ್ಪ ತೋರಿರುವ ಸಿಎಂ ವಿಡಿಯೋ ವೈರಲ್‌ ಆಗುತ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ನಿರಂತರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೂಡ ಆಗಮಿಸಿದ್ದರು. ಆದರೆ ಕಾಂಗ್ರೆಸ್ ಪ್ರತಿಭಟನೆಯನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೂಡ ಪ್ರತಿಭಟನೆ ನಡೆಸುತ್ತಿದ್ದರು.

ಇನ್ನು ಕಾಂಗ್ರೆಸ್ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಎಂಟ್ರಿ ಕೊಟ್ಟಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಮಾತನಾಡುತ್ತಿದ್ದರು. ಭಾಷಣದ ಮಧ್ಯೆ, ಧಾರವಾಡದ ಎಎಸ್​ಪಿ ನಾರಾಯಣ ಭರಮನಿ ಅವರು ವೇದಿಕೆ ಮೇಲೆ ಆಗಮಿಸುತ್ತಾರೆ. ವೇದಿಕೆಗೆ ಬಂದ ಅವರು, ಬಿಜೆಪಿ ಕಾರ್ಯಕರ್ತರು ವೇದಿಕೆಗೆ ನುಗ್ಗುತ್ತಿದ್ದಾರೆ ಎಂದು ಸಿಎಂಗೆ ಮಾಹಿತಿ ನೀಡುತ್ತಾರೆ. ಅಷ್ಟಕ್ಕೇ ಕೋಪಿಸಿಕೊಂಡ ಸಿದ್ದರಾಮಯ್ಯ, ವೇದಿಕೆಗೆ ಬರುವ ತನಕ ನೀವು ಏನು ಮಾಡುತ್ತಿದ್ದೀರಿ? ಎಂದು ಅಧಿಕಾರಿಯ ಮೇಲೆಯೇ ಕೈಎತ್ತಿದ್ದಾರೆ. ಇದರ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು ಚರ್ಚೆಗೆ ಕಾರಣವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *