Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರತಿಷ್ಠಿತ ವಸತಿ ನಿಲಯದ ಗೋಡೆಯ ಮೇಲೆ ದೇಶ ವಿರೋಧಿ ಬರಹ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

Spread the love

ಕಾರ್ಕಳ: ಕಾರ್ಕಳ ತಾಲೂಕಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸುವುದಾಗಿ ಉಡುಪಿ ಜಿಲ್ಲೆ ಎಸ್‌ಪಿ ಡಾ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರೊಂದಿಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಇದೀಗ ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಸಿಎಂ ಒಮರ್ ಅಬ್ದುಲ್ಲಾ ಅವರು, “ಇದೊಂದು ಆಘಾತಕಾರಿ ಸುದ್ದಿ, ನಿನ್ನೆಯಷ್ಟೇ ನಾನು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯ ಬಗ್ಗೆ ಚರ್ಚೆಯನ್ನು ನಡೆಸಿದ್ದೆ. ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಅವರು ಕೂಡ ಅಲ್ಲಿದ್ದರು. ನನ್ನ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಚರ್ಚೆಗಳನ್ನು ಕೂಡ ನಡೆಸಲಾಗಿತ್ತು. ಈ ಚರ್ಚೆಯಲ್ಲಿ ಅವರು ಕೂಡ ಭಾಗಿಯಾಗಿದ್ದರು. ಆದರೆ ಇಂದು ಬೆಳಿಗ್ಗೆ ಪಾಕ್ ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಅವರ ಮನೆಯ ಮೇಲೆ ಶೆಲ್ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಭೀಕರ ಆಘಾತದ ಬಗ್ಗೆ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪೋಸ್ಟ್ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *