Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಮಗಳೂರು: ಹಸುವಿನ ಕೆಚ್ಚಲು ಕತ್ತರಿಸಿದ ಕ್ರೌರ್ಯ – ರಾಜ್ಯದಲ್ಲಿ ಮತ್ತೆ ಗೋವುಗಳ ಮೇಲೆ ದೌರ್ಜನ್ಯ

Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತ ದೌರ್ಜನ್ಯ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬ ಹೀಗೆ ಮಾಡಿದ್ದ ಘಟನೆಯ ನೆನಪಿನ್ನೂ ಮಾಸುವ ಮೊದಲೇ ಮತ್ತೊಬ್ಬ ಇಂಥ ವಿಕೃತ ಮೆರೆದಿದ್ದಾನೆ.

ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜನವರಿ 12ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಎಸಗಲಾಗಿತ್ತು. ಜನವರಿ 16ರಂದು ಮೈಸೂರು ಜಿಲ್ಲೆ ನಂಜನಗೂಡು ನಂಜುಂಡೇಶ್ವರ ದೇವಾಲಯದ ಬಳಿ ಕರುವಿನ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿದ್ದರು. ಜನವರಿ 20ರಂದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಂದು ಹಾಕಲಾಗಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಗೋವುಗಳ ಮೇಲೆ ದೌರ್ಜನ್ಯ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *