Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸ್ನೇಹಿತನೇ ಶತ್ರುವಾದ ಘಟನೆ – 6ನೇ ತರಗತಿ ಬಾಲಕನಿಂದ 9ನೇ ತರಗತಿ ಬಾಲಕನ ಕೊ*ಲೆ

Spread the love

ಹುಬ್ಬಳ್ಳಿ: ಕ್ಷುಲ್ಲಕ ವಿಷಯವಾಗಿ ಅಪ್ರಾಪ್ತ ಸ್ನೇಹಿತರಿಬ್ಬರ ನಡುವೆ ಜಗಳ ಉಂಟಾಗಿ ವಿಕೋಪಕ್ಕೆ ಹೋದಾಗ ಓರ್ವನು ಚಾಕುವಿನಿಂದ ಇರಿದು ಕೊ*ಲೆ ಮಾಡಿದ ಘಟನೆ ಸೋಮವಾರ ರಾತ್ರಿ ಮೂರುಸಾವಿರ ಮಠ ಬಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ.
ಡಿಜೆ ಮತ್ತು ಲೈಟಿಂಗ್‌ ವಿಷಯಕ್ಕೆ ಸಂಬಂಧಿಸಿ ಅಪ್ರಾಪ್ತ ಸ್ನೇಹಿತರ ನಡುವೆ ಜಗಳವಾಗಿದೆ.
ಅದು ವಿಕೋಪಕ್ಕೆ ಹೋದಾಗ ಸಿಟ್ಟಾದ 6ನೇ ತರಗತಿ ಓದುತ್ತಿದ್ದ ಬಾಲಕನು ಮನೆಯಿಂದ ಚಾಕು ತಂದವನೇ 9ನೇ ತರಗತಿಯ ಬಾಲಕನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಆತನನ್ನು ಕೆಎಂಸಿಆರ್‌ಐ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಕಮರಿಪೇಟೆ ಠಾಣೆ ಪೋಲೀಸರು ಭೇಟಿಕೊಟ್ಟು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಂಸಿಆರ್‌ಐ ಆಸ್ಪತ್ರೆಗೆ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಜೀವನದಲ್ಲೇ ಇಂತಹ ಘಟನೆ ನೋಡಿಲ್ಲ. ಆರನೇ ತರಗತಿ ಬಾಲಕ ಕೊ*ಲೆ ಮಾಡುವಂತಹ ಮನಸ್ಥಿತಿ ಬಂದಿದೆ. ಆತ ನಮ್ಮ ಸೊಂಟದೆತ್ತರಕ್ಕೂ ಇಲ್ಲ ಎಂದು ದಿಗ್ಭ್ರಮೆ ವ್ಯಕ್ತಪಡಿಸಿದರು.

ಪೋಷಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಮೃತ ಬಾಲಕ 8ನೇ ತರಗತಿ ಪಾಸ್‌ ಆಗಿದ್ದಾನೆ. ಒಬ್ಬನೇ ಮಗ. ತಂದೆ-ತಾಯಿ ರೊಟ್ಟಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಗಾಯದ ತೀವ್ರತೆ ಅಂದಾಜಿಲ್ಲ. ಇದು ಹೃದಯ ವಿದ್ರಾವಕ ಘಟನೆ. ಕೊ*ಲೆ ಮಾಡಿದ ಬಾಲಕನ ಕುಟುಂಬವೂ ಬಡತನದ್ದಾಗಿದೆ. ಕಾರ್ಯವಿಧಾನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *