Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಗ್ರ ಎನ್‌ಕೌಂಟರ್ ಮುನ್ನ ತಾಯಿಗೆ ವಿಡಿಯೋ ಕಾಲ್: ಶರಣಾಗು ಎಂದ ತಾಯಿಗೆ ಮಗನ ನಿರಾಕರಣೆ

Spread the love

ಶ್ರೀನಗರ: ಜಮ್ಮು ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಈ ಪೈಕಿ ಓರ್ವ ಉಗ್ರ ಸಾಯುವ ಮುನ್ನ ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಆತನ ತಾಯಿ ಶರಣಾಗುವಂತೆ ಬೇಡಿಕೊಂಡಿದ್ದಾರೆ.

ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ತ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಮೂವರು ಜೈಶ್ ಉಗ್ರರನ್ನು ಹೊಡೆದುರುಳಿಸಿದೆ. ಈ ಎನ್‌ಕೌಂಟರ್ ಮುನ್ನ ಜೈಶ್ ಎ ಮೊಹಮ್ಮದ್ ಉಗ್ರ ಅಮೀರ್ ನಜೀರ್ತನ್ನ ಕುಟುಂಬಸ್ಥರಿಗೆ ವಿಡಿಯೋ ಕಾಲ್ ಮಾಡಿದ್ದು, ಈ ವೇಳೆ ಆತನ ತಾಯಿ ನೀನು ಶರಣಾಗು, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಉಗ್ರ ಅಮೀರ್ ನಜೀರ್ ಎಕೆ-47 ಗನ್ ಹಿಡಿದುಕೊಂಡು ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಮನೆಗೆ ವಿಡಿಯೋ ಕಾಲ್ ಮಾಡಿದ್ದಾನೆ. ತಾಯಿ ಹಾಗೂ ಸಹೋದರಿ ಜೊತೆ ಮಾತನಾಡಿದ್ದು, ಸಹೋದರನ ಬಗ್ಗೆ ವಿಚಾರಿಸಿದ್ದಾನೆ. ಈ ವೇಳೆ ತಾಯಿ ನೀನು ಶರಣಾಗಿ, ನಿನ್ನ ಜೀವ ಉಳಿಸಿಕೋ ಎಂದು ಬೇಡಿಕೊಂಡಿದ್ದಾರೆ. ಜೊತೆಗೆ ಆತನ ಕುಟುಂಬಸ್ಥರು ಕೂಡ ಮನವಿ ಮಾಡಿಕೊಂಡಿದ್ದಾರೆ. ಆದರೆ ಅಮೀರ್, ಸೇನೆ ಮುಂದೆ ಬರಲಿ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾನೆ.

ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್ ಇದಾಗಿದೆ. ಹತರಾದ ಮೂವರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳಾದ ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಜೊತೆಗೆ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಮೂಲಗಳು ತಿಳಿಸಿವೆ.

ಈ ವಿಡಿಯೋ ಅಲ್ಲದೇ ಉಗ್ರರು ಕಟ್ಟಡದಲ್ಲಿ ಅವಿತಿದ್ದ ಕೊನೆ ಕ್ಷಣದ ವಿಡಿಯೋ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *