ಬಂಟ್ವಾಳದ ಪಾಣೆಮಂಗಳೂರಲ್ಲಿ ವ್ಯಕ್ತಿಗೆ ಚಾಕು ದಾಳಿ: ಇಬ್ಬರು ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪುಡಿ ರೌಡಿಗಳಿಗೆ ಖಾಕಿ ಖಡಕ್ ವಾರ್ನಿಂಗ್ ಕೊಟ್ಟ ಬಳಿಕವೂ ಪುಂಡಾಟ ಮುಂದುವರಿದೆ. ಬಂಟ್ವಾಳದ ಪಾಣೆಮಂಗಳೂರು ಬಳಿ ವ್ಯಕ್ತಿಗೆ ಚಾಕು ಇರಿದ ಘಟನೆ ನಡೆದಿದೆ.
ಚಾಕು ಇರಿದ ಕೇಸ್, ಇಬ್ಬರ ಬಂಧನ
ಹಮೀದ್ ಎಂಬಾತನಿಗೆ ಚಾಕು ಇರಿಯಲಾಗಿದ್ದು, ಈ ಸಂಬಂಧ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಬೈಕ್ನಲ್ಲಿ ಬಂದ ಇಬ್ಬರಿಂದ ದಾಳಿ ನಡೆದಿದೆ. ಪಾಣೆಮಂಗಳೂರಿನ ಅಕ್ಕರೆಯಂಗಡಿ ಬಳಿ ನಡೆದಿದ್ದ ಈ ದಾಳಿಗೆ ಪೈಂಟರ್ ಹಮೀದ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ.