Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸೈಕಲ್ ಚೈನ್ ಸಿಲುಕಿ ನರಳಿದ ಬಾಲಕನಿಗೆ ಅಗ್ನಿಶಾಮಕ ದಳದ ತಕ್ಷಣದ ನೆರವು

Spread the love

ಕಾ ಸರಗೋಡು: ಸೈಕಲ್ ಚೈನ್ ಗೆ ಕಾಲು ಸಿಲುಕಿ ನರಳಾಡಿದ ಆರು ವರ್ಷದ ಬಾಲಕನನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ತಳಂಗರೆಯಲ್ಲಿ ನಡೆದಿದೆ.

ಸಂಜೆ ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನ ಕಾಲಿಗೆ ಚೈನ್ ಸಿಲುಕಿಕೊಂಡಿತ್ತು. ಬಾಲಕನ ಬೊಬ್ಬೆ ಕೇಳಿ ಧಾವಿಸಿದ ಮನೆಯವರು ಹಾಗೂ ಸ್ಥಳೀಯರು ಎಷ್ಟೇ ತೆಗೆಯಲೆತ್ನಿಸಿದರೂ ಸಾಧ್ಯವಾಗಲಿಲ್ಲ.

ಬಳಿಕ ಕಾಸರಗೋಡಿನ ಅಗ್ನಿ ಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಟ್ಟರ್ ಬಳಸಿ ಚೈನ್ ತುಂಡರಿಸಿ ಬಾಲಕನನ್ನು ರಕ್ಷಿಸಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿ ವಿ. ಎನ್ ಗೋಪಾಲನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಬಾಲಕನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *