ದಿವ್ಯಾಂಗರಿಗೆ ಕೇಂದ್ರ ವಸತಿ ಹಂಚಿಕೆಯಲ್ಲಿ 4% ಮೀಸಲಾತಿ: ಮಹತ್ವದ ನಿರ್ಧಾರ ಘೋಷಿಸಿದ ಖಟ್ಟರ್

ನವದೆಹಲಿ: ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ದಿವ್ಯಾಂಗರಿಗೆ 4% ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ʻಸಬ್ ಕಾ ಸಾಥ್, ಸಬ್ ಕಾ ವಿಕಾಸ್ʼ ಉದ್ದೇಶಕ್ಕೆ ಪೂರಕವಾಗುವಂತೆ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಪ್ರವೇಶ ಭಾರತ ಅಭಿಯಾನದಡಿಯಲ್ಲಿ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಹೇಳಿದೆ.
ಇನ್ಮುಂದೆ ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗುವುದು, ಇದು ಸಾರ್ವಜನಿಕ ಸೇವೆಗಳಲ್ಲಿ ಸಮಾನತೆ, ಘನತೆ ಮತ್ತು ಪ್ರವೇಶದತ್ತ ಗಣನೀಯ ಹೆಜ್ಜೆಯಾಗಿದೆ ಎಂದು ಖಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ (RPWD) ಕಾಯ್ದೆ, 2016 ರ ಅಡಿಯಲ್ಲಿ, ಎಸ್ಟೇಟ್ ನಿರ್ದೇಶನಾಲಯವು ಅಂಗವಿಕಲರಿಗೆ ಕೇಂದ್ರ ಸರ್ಕಾರಿ ನಿವಾಸಗಳಿಗೆ ಸಮಂಜಸವಾದ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸಿದೆ.