Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ಪಾಕ್ ಇನ್ನು ಮೈಸೂರು ಶ್ರೀ: ಜೈಪುರದಲ್ಲಿ ಸಿಹಿತಿಂಡಿಗಳ ಹೆಸರಿನಲ್ಲಿ ಬದಲಾವಣೆ

Spread the love

ಜೈಪುರ: ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ರಾಜಸ್ಥಾನದ ಜೈಪುರದಲ್ಲಿರುವ ಅಂಗಡಿಗಳು ಪ್ರಸಿದ್ಧ ‘ಮೈಸೂರು ಪಾಕ್’ ಸೇರಿದಂತೆ ವಿವಿಧ ಸಿಹಿತಿಂಡಿಗಳ ಹೆಸರನ್ನು ಬದಲಾಯಿಸಿವೆ. ಬೇಕರಿಯೊಂದರಲ್ಲಿ ಎಲ್ಲಾ ಸಿಹಿತಿಂಡಿಗಳ ಹೆಸರುಗಳಿಂದ ‘ಪಾಕ್’ ಪದವನ್ನು ತೆಗೆದುಹಾಕಿ ಅದನ್ನು ‘ಶ್ರೀ’ ಎಂದು ಬದಲಾಯಿಸಿದ್ದಾರೆ. ಹೀಗಾಗಿ, ಇಲ್ಲಿ ಮೈಸೂರು ಪಾಕ್ ಮೈಸೂರು ಶ್ರೀಯಾಗಿ  ಬದಲಾಗಿದೆ. “ನಾವು ‘ಪಾಕ್’ ಪದವನ್ನು ನಮ್ಮ ಸಿಹಿತಿಂಡಿಗಳ ಹೆಸರುಗಳಿಂದ ತೆಗೆದುಹಾಕಿದ್ದೇವೆ. ನಾವು ‘ಮೋತಿ ಪಾಕ್’ ಅನ್ನು ‘ಮೋತಿ ಶ್ರೀ’ ಎಂದು, ‘ಗೋಂದ್ ಪಾಕ್’ ಅನ್ನು ‘ಗೋಂದ್ ಶ್ರೀ’ ಎಂದು, ‘ಮೈಸೂರು ಪಾಕ್’ ಅನ್ನು ‘ಮೈಸೂರು ಶ್ರೀ’ ಎಂದು ಮರುನಾಮಕರಣ ಮಾಡಿದ್ದೇವೆ” ಎಂದು ಅಂಗಡಿಯವರು ತಿಳಿಸಿದ್ದಾರೆ.

ಮೈಸೂರಿನ ತಿಂಡಿ ಮೈಸೂರು ಪಾಕ್​ ಎಂದರೆ ಕನ್ನಡದಲ್ಲಿ ಮೈಸೂರಿನ ಸಿಹಿ ಅಥವಾ ಸಕ್ಕರೆ ಸಿರಪ್ ಎಂದರ್ಥ. ಇಲ್ಲಿ ಪಾಕ್​ಗೆ ಸಿಹಿ ಎಂಬ ಅರ್ಥವಿದೆ. ಆದರೆ, ಪಾಕಿಸ್ತಾನದ ಯಾವ ಹೆಸರೂ ಬೇಡವೆಂದು ಬೇಕರಿಯವರು ಈ ನಿರ್ಧಾರ ಮಾಡಿದ್ದಾರೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಏಪ್ರಿಲ್ 22ರಂದು ನಡೆದ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ನಂತರ ಪಾಕಿಸ್ತಾನವು ಬೃಹತ್ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ನಡೆಸಿತು, ಆದರೆ ಬೆದರಿಕೆಗಳನ್ನು ವಿಫಲಗೊಳಿಸಲಾಯಿತು. ಅದಕ್ಕೆ ಪ್ರತೀಕಾರವಾಗಿ, ಭಾರತೀಯ ಪಡೆಗಳು ಪಾಕಿಸ್ತಾನದಲ್ಲಿನ ವಾಯುನೆಲೆಗಳ ಮೇಲೆ ದಾಳಿ ಮಾಡಿದವು. ಮೇ 10ರಂದು ನಡೆದ ಕದನ ವಿರಾಮವು ದಾಳಿಯನ್ನು ಕೊನೆಗೊಳಿಸಿತು.


Spread the love
Share:

administrator

Leave a Reply

Your email address will not be published. Required fields are marked *