Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

RCB ಕಪ್ ಗೆದ್ದರೆ “ಫ್ಯಾನ್ಸ್ ಹಬ್ಬಕ್ಕೆ ಸರ್ಕಾರ ರಜೆ ಘೋಷಿಸಲಿ” – ಸಿಎಂಗೆ ಅಭಿಮಾನಿಯ ಮನವಿ

Spread the love

ಬೆಳಗಾವಿ: ಪ್ಲೇ ಆಫ್​ನಲ್ಲಿ ಪಂಜಾಬ್​ಗೆ ಸೋಲುಣಿಸಿದ ಆರ್​ಸಿಬಿ  ತಂಡ ಭರ್ಜರಿಯಾಗಿ ಫೈನಲ್​ಗೆ ಎಂಟ್ರಿಕೊಟ್ಟಿದೆ. 18 ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಕಪ್ ಗೆಲುವಿನ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಈ ಬಾರಿ ಟ್ರೋಫಿ ನಮ್ದೇ ಅನ್ನೋ ಮಹಾ ಸಂದೇಶ ರವಾನಿಸಲು ಮುಂದಾಗಿರುವ ಈ ಸಂದರ್ಭದಲ್ಲಿ ಓರ್ವ ಅಭಿಮಾನಿ  ಆರ್‌ಸಿಬಿ ಗೆದ್ದರೆ ಆ ದಿನವನ್ನು ‘ಆರ್​​ಸಿಬಿ ಫ್ಯಾನ್ಸ್​​​ ಹಬ್ಬ’ ಎಂದು ಘೋಷಿಸಿ ಒಂದು ದಿನ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್‌ಸಿಬಿ ಅಭಿಮಾನಿಯಾಗಿದ್ದು, ಆರ್‌ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್‌ಸಿಬಿ ಫೈನಲ್‌ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಅಭಿಮಾನಿ ಬರೆದ ಪತ್ರದಲ್ಲೇನಿದೆ?

ಐಪಿಎಲ್​​ ಪಂದ್ಯದಲ್ಲಿ ಒಂದು ವೇಳೆ ಆರ್​ಸಿಬಿ ತಂಡ ಫೈನಲ್​ಗೆ ಹೋಗಿ ಕಪ್​ ಗೆದ್ದರೇ ಆ ದಿನ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್​ಸಿಬಿ ಫ್ಯಾನ್ಸ್​ ಹಬ್ಬ’ ಅಂತ ಅಧೀಕೃತವಾಗಿ ಘೋಷಿಸಿ ಪ್ರತಿವರ್ಷ ಸರ್ಕಾರ ರಜೆ ನೀಡಬೇಕು.

ಏಕೆಂದರೆ ಆರ್​ಸಿಬಿ ಫ್ಯಾನ್ಸ್​ಗಳ ಬಹುದಿನದ ಕನಸು ನನಸಾಗಲಿದ್ದು, ಕರ್ನಾಟಕ ರಾಜ್ಯೋತ್ಸವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತೇವೋ ಅದೇ ರೀತಿ ಆರ್​ಸಿಬಿ ಫ್ಯಾನ್ಸ್​​​ ಹಬ್ಬ ಆಚರಿಸುವುದಕ್ಕೆ ಕರ್ನಾಟಕ ಸರ್ಕಾರ ಅನುವು ಮಾಡಿಕೊಡಬೇಕೆಂದು ವಿನಂತಿ ಮಾಡಿಕೊಳ್ಳುತ್ತೇವೆ.

ಇದನ್ನು ಕರ್ನಾಟಕ ಸರ್ಕಾರ ಗಣನೀಯವಾಗಿ ತೆಗೆದುಕೊಂಡು ರಜೆ ಮತ್ತು ಆರ್​ಸಿಬಿ ಫ್ಯಾನ್ಸ್​ ಹಬ್ಬ ಆಚರಿಸುವುದಕ್ಕೆ ಪರವಾಣಿಗೆ ಕೊಡಬೇಕೆಂದು ಎಲ್ಲಾ ಆರ್​ಸಿಬಿ ಫ್ಯಾನ್ಸ್ ಪರವಾಗಿ ಕಳಕಳಿಯ ವಿನಂತಿ ಮಾಡಿಕೊಳ್ಳುತ್ತೇವೆ.


Spread the love
Share:

administrator

Leave a Reply

Your email address will not be published. Required fields are marked *