ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ತತ್ತರಿಸಿದ ವೃದ್ಧ – ಆತ್ಮಹತ್ಯೆಗೆ ಶರಣು!

ಹುಬ್ಬಳ್ಳಿ : ಕಳೆದ ಕೆಲವು ತಿಂಗಳುಗಳ ಹಿಂದೆ ಇಡೀ ರಾಜ್ಯವ್ಯಾಪಿ ಸದ್ದು ಮಾಡಿದ್ದ ಮೈಕ್ರೋ ಫೈನಾನ್ಸ್ ಹಾವಳಿ ಕುರಿತ ನೂರಾರು ಪ್ರಕರಣಗಳು ರಾಜ್ಯ ಸರ್ಕಾರದ ಗಮನಕ್ಕೆ ಬಂದ ಹಿನ್ನಲೆ , ಇದಕ್ಕೆ ಕಡಿವಾಣ ಹಾಕಲೆಂದೇ ಸರ್ಕಾರ ಹೊಸ ಕಾನೂನು ಜಾರಿ ಮಾಡಿದೆ.ಆದ್ರೆ ಇದೀಗ ಇದೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ.
ಹುಬ್ಬಳ್ಳಿಯ ಎಸ್.ಎಂ ಕೃಷ್ಣ ನಗರದ 65 ವರ್ಷದ ಭಾಷಾ ಸಾಬ್ ಸಂಕೇಶ್ವರ ಎಂಬ ವ್ಯಕ್ತಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಈ ವ್ಯಾಜ್ತಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾರೆ.
ಹೀಗೆ ಆತ್ಮಹತ್ಯೆಗೆ ಶರಣಾದ ಬಾಷಾಸಾಬ್ ಸಂಕೇಶ್ವರ್ ಅವರು, ಲಲಿತ, ಕಿಟ್ಯಾ, ವಿನೋದ್ ಬಂಕಾಪುರ್ ಹಾಗೂ ಅಶ್ಪಾಕ ಎಂಬುವವರಿಂದ ಸಾಲ ಪಡೆದಿದ್ದರು ಎನ್ನಲಾಗಿದೆ.ಹೀಗಾಗಿ ಪ್ರತಿನಿತ್ಯ ಈ ವ್ಯಕ್ತಿಗಳು ಸಾಲ ಹಿಂತಿರುಗಿಸುವಂತೆ ಕಿರುಕುಳ ನೀಡುತ್ತಿದ್ದರು ಎಂದು ಮೃತ ಬಾಷಾಸಾಬ್ ಆರೋಪಿಸಿದ್ದಾರೆ.
ಅಂತಿಮವಾಗಿ ಸಾಲಗಾರರ ಕಾಟ ತಡೆಯಲಾಗದೆ ಕಿರುಕುಳಕ್ಕೆ ಬೇಸತ್ತು ಬಾಷಾಸಾಬ್ ಮನ್ನೆಯಲ್ಲಿ ಯಾರೂ ಇಲ್ಲದ ವೇಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಮಾಡಿದ್ದಾರೆ. ಈ ಘಟನೆ ಕುರಿತು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.