ಭಾರತವನ್ನು ಮಾತುಕತೆಗೆ ಒಪ್ಪಿಸಬೇಕು: ಅಮೆರಿಕ ಅಧ್ಯಕ್ಷರಿಗೆ ಪಾಕಿಸ್ತಾನದ ಮನವಿ

ಇಸ್ಲಾಮಾಬಾದ್: ‘‘ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು’’ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಮನವಿ ಮಾಡಿದ್ದಾರೆ. ಈಗಾಗಲೇ ಭಾರತವು ಪಾಕಿಸ್ತಾನ ಭಯೋತ್ಪಾದನೆಗೆ ಸಹಕಾರ ನೀಡುವುದನ್ನು ಬಿಡುವವರೆಗೂ ಅವರೊಂದಿಗೆ ಬೇರೆ ಯಾವ ರೀತಿ ಮಾತುಕತೆಯೂ ಇಲ್ಲ ಇನ್ನೇನಿದ್ದರೂ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಮಾತನಾಡುತ್ತೇವೆ ಎಂದು ಹೇಳಿತ್ತು.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನ ಮೂಲದ ಉಗ್ರರು ಅಮಾಯಕ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಅದಕ್ಕೂ ಮೊದಲು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತ್ತು, ಇದರಿಂದ ಭಾರತದ ಮೂಲಕ ಪಾಕಿಸ್ತಾನಕ್ಕೆ ಹೋಗುವ ನೀರಿಗೆ ತಡೆ ಬಿದ್ದಿತ್ತು.
ಈ ನಿರ್ಧಾರವು ಪಾಕಿಸ್ತಾನದಲ್ಲಿ ನೀರಿನ ಅಭಾವ ಸೃಷ್ಟಿಸಿದೆ. ಏರ್ಪೋರ್ಟ್ನಲ್ಲಿ ಕೂಡ ನೀರು ಇಲ್ಲದೆ ಜನ ಪರದಾಡುವಂತಾಗಿದೆ. ಮೇ 10ರಂದು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಪಾಕಿಸ್ತಾನವು ಸಿಂಧೂ ನದಿ ಒಪ್ಪಂದದ ವಿಚಾರವಾಗಿ ಮಾತನಾಡಲು ಬಯಸಿತ್ತು ಆದರೆ ಭಾರತ ಅದಕ್ಕೆ ಸಿದ್ಧವಿರಲಿಲ್ಲ.
ಪಾಕಿಸ್ತಾನದಿಂದ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಈ ಒಪ್ಪಂದದ ಬಗ್ಗೆ ಮಾತಿಲ್ಲ ಎಂದು ಸ್ಪಷ್ಟಪಡಿಸಿತ್ತು. ಪ್ರಧಾನಿ ಮೋದಿ ಕೂಡ ರಕ್ತ ಹಾಗೂ ನೀರು ಒಂದೇ ಬಾರಿ ಹರಿಯಲು ಸಾಧ್ಯವಿಲ್ಲ ಎಂದು ಕರಾರುವಕ್ಕಾಗಿ ಹೇಳಿದ್ದರು. ಹೀಗಾಗಿ ಪಾಕಿಸ್ತಾನವು ಹೇಗೂ ಭಾರತ ಹಾಗೂ ಅಮೆರಿಕ ಸಂಬಂಧ ತುಂಬಾ ಚೆನ್ನಾಗಿದೆ ಎಂಬುದು ತಿಳಿದಿದ್ದು, ಭಾರತವನ್ನು ಒಪ್ಪಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಮನವಿ ಮಾಡುತ್ತಿದ್ದಾರೆ.
ಭಾರತದೊಂದಿಗಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಟ್ರಂಪ್ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಸಂವಾದವನ್ನು ಉತ್ತೇಜಿಸುವಲ್ಲಿ ಅಮೆರಿಕ ಹೆಚ್ಚು ಸಕ್ರಿಯ ಪಾತ್ರ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಷರೀಫ್ ಹೇಳಿಕೆ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಈ ಹಿಂದೆ ಮಾಡಿದ ಹೇಳಿಕೆಗಳನ್ನು ಪ್ರತಿಧ್ವನಿಸುತ್ತವೆ, ಅವರು ಟ್ರಂಪ್ ಕದನ ವಿರಾಮ ಒಪ್ಪಂದ ಜಾರಿಗೆ ತರಲು ಸಹಾಯ ಮಾಡಿದ್ದರು ಎಂದು ಹೇಳಿದ್ದರು. ಆದರೆ ಭಾರತ ಈ ಹೇಳಿಕೆಯನ್ನು ತಿರಸ್ಕರಿಸಿತ್ತು, ಎರಡು ದೇಶಗಳ ನಡುವೆ ಮಧ್ಯವರ್ತಿ ಇಲ್ಲ ಎಂದು ಹೇಳಿದ್ದರು.
ಈ ಕದನ ವಿರಾಮವನ್ನು ಕಾಪಾಡಿಕೊಳ್ಳಲು ಅಮೆರಿಕ ಸಹಾಯ ಮಾಡಲು ಸಿದ್ಧರಿದ್ದರೆ, ಸಮಗ್ರ ಮಾತುಕತೆಗಳನ್ನು ಸುಗಮಗೊಳಿಸುವಲ್ಲಿ ಅದರ ಪಾಲ್ಗೊಳ್ಳುವಿಕೆ ಅಷ್ಟೇ ಉಪಯುಕ್ತವಾಗಿರುತ್ತದೆ ಎಂದು ನಿರೀಕ್ಷಿಸುವುದು ಸಮಂಜಸವಾಗಿದೆ.
ಭಾರತದ ವಿರುದ್ಧ ಪಾಕಿಸ್ತಾನ ಪ್ರಾಯೋಜಿಸುತ್ತಿರುವ ಭಯೋತ್ಪಾದನೆಯನ್ನು ಕೊನೆಗೊಳಿಸುವ ಬಗ್ಗೆ ಮತ್ತು ಆಕ್ರಮಿತ ಕಾಶ್ಮೀರದ ಭಾಗಗಳನ್ನು ಹಿಂದಿರುಗಿಸುವ ಬಗ್ಗೆ ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ನಡೆಯಲಿದೆ ಎಂದು ಭಾರತ ಈಗಾಗಲೇ ಹೇಳಿದೆ.
ಪಾಕಿಸ್ತಾನವು ಭಯೋತ್ಪಾದನೆಯ ಬಲಿಪಶು ಎಂದು ಪದೇ ಪದೇ ಹೇಳಿಕೊಳ್ಳುವುದನ್ನು ತರೂರ್ ಟೀಕಿಸಿದ್ದರು, ಇದು ಭಯೋತ್ಪಾದಕ ಜಾಲಗಳಿಗೆ ಆಶ್ರಯ ನೀಡುವುದನ್ನು ಮುಂದುವರೆಸುತ್ತಾ ಆರೋಪವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದರು.