Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

1 ಸಾವಿರ ಪೋಲಿಸ್ ಬದಲು 5 ಸಾವಿರ ಪೊಲೀಸರಿದ್ದರು ಎಂದು ಸರಕಾರ ಸುಳ್ಳು ಹೇಳಿತೆ?

Spread the love

ಬೆಂಗಳೂರು:ಆರ್‌ಸಿಬಿ ಇವೆಂಟ್‌ನಲ್ಲಿ 11 ಜನ ಅಮಾಯಕರು ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ದಾರುಣವಾಗಿ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜನರಿಗೆ ಹೇಳಿದ ಸುಳ್ಳು ಹೇಳಿದರಾ ಎಂಬ ಆರೋಪಗಳು ಕೇಳಿಬರುತ್ತಿವೆ.

ಬುಧವಾರ ದಾರುಣ ಘಟನೆ ನಡೆದ ಬಳಿಕ ಡಿಸಿಎಂ ಅವರು ಸರ್ಕಾರ ಎಲ್ಲಾ ರೀತಿಯ ಭದ್ರತೆ ಕಲ್ಪಿಸಿತ್ತು. ಒಟ್ಟು 5 ಸಾವಿರ ಮಂಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು ಎಂದಿದ್ದರು.

ಆದರೆ, ಈ ಮಾಹಿತಿ ಸುಳ್ಳು ಎನ್ನುವುದನ್ನು ಸರ್ಕಾರವೇ ಕೋರ್ಟ್‌ಗೆ ತಿಳಿಸಿದೆ. 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ದಿನದಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಗರ ಪೊಲೀಸ್ ಆಯುಕ್ತರು, ಡಿಸಿಪಿಗಳು ಮತ್ತು ಎಸಿಪಿಗಳು ಸೇರಿದಂತೆ 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಆದರೆ, ಬುಧವಾರ ಇಡೀ ದಿನ ಡಿಸಿಎಂ ಡಿಕೆ ಶಿವಕುಮಾರ್, ಜನಸಂದಣಿಯನ್ನು ನಿರ್ವಹಿಸಲು 5,000 ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿತ್ತು ಎಂದು ಹೇಳುತ್ತಿದ್ದರು.

ಇಂದು ಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರದ ಪರ ವಕೀಲರು, ನೀರಿನ ಟ್ಯಾಂಕರ್‌ಗಳು, ಌಂಬ್ಯುಲೆನ್ಸ್‌ಗಳು ಮತ್ತು ಕಮಾಂಡ್ ಮತ್ತು ಕಂಟ್ರೋಲ್ ವಾಹನಗಳು ಸಹ ಇದ್ದವು. ಇದು ಹಿಂದಿನ ಪಂದ್ಯಗಳಿಗೆ ಮಾಡಿದ್ದ ವ್ಯವಸ್ಥೆಗಿಂತ ಹೆಚ್ಚಿನ ವ್ಯವಸ್ಥೆಯನ್ನು ಈ ಬಾರಿ ಮಾಡಲಾಗಿತ್ತು ಎಂದಿದ್ದಾರೆ.

ಇದರ ಹೊರತಾಗಿಯೂ, ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದರಿಂದ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ಸರ್ಕಾರ ಹೇಳಿದೆ. ಹಲವರು ಕ್ರೀಡಾಂಗಣಕ್ಕೆ ಉಚಿತ ಪ್ರವೇಶವಿದೆ ಎಂದು ನಂಬಿದ್ದರು. ಕ್ರೀಡಾಂಗಣವು 35,000 ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ 30,000 ಟಿಕೆಟ್‌ಗಳು ಮಾತ್ರ ಮಾರಾಟವಾಗುತ್ತವೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ‘ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳುತ್ತಿಲ್ಲ. ನ್ಯಾಯಾಲಯವು ಯಾವುದೇ ನಿರ್ದೇಶನ ನೀಡಿದರೂ, ನಾವು ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ’ ಎಂದು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *