ಬಂಟ್ವಾಳದಲ್ಲಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಗೆ ಯುವಕ ಮೃತ್ಯು

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಅಮೆಮ್ಮಾರ್ ನಿವಾಸಿ ಝಾಹಿದ್ (28) ಮೃತ ಯುವಕ.
ಅವರು ಶಾಲೆಗೆ ತೆರಳುವ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಆಗಮಿಸಿದ ಬಸ್ ಢಿಕ್ಕಿ ಹೊಡೆಯಿತು.
ಘಟನೆಯಲ್ಲಿ ಝಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಟೋ ಚಾಲಕನಾಗಿ ದುಡಿಯುತ್ತಿದ್ದ ಝಾಹಿದ್ ತಾಯಿ, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.