ಚಿನ್ನಸ್ವಾಮಿ ದುರಂತ: ಮಾನವ ಹಕ್ಕು ಆಯೋಗದಿಂದ ಸ್ವಯಂಪ್ರೇರಿತ ದೂರು, ಐಪಿಎಸ್ ದಯಾನಂದ್ಗೆ ನೋಟಿಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ದುರಂತ ಪ್ರಕರಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಪೊಲೀಸ್ ಆಯುಕ್ತ ಸಹಿತ ಮೂವರಿಗೆ ನೋಟಿಸ್ ಜಾರಿ ಮಾಡಿದೆ.
ಇದು ಸದ್ಯ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ದಯಾನಂದ ಅವರಿಗೆ ಕುತ್ತು ತರುವ ಸಾಧ್ಯತೆಗಳಿವೆ.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಂ ಭಟ್, ಸದಸ್ಯ ಸುರೇಶ್ ನೇತೃತ್ವದ ನಿಯೋಗವು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೇಟ್ಗಳನ್ನು ತಡೆದಿರುವುದು ಹಾಗೂ ಕೇವಲ 2 ಆಯಂಬುಲೆನ್ಸ್ ಮಾತ್ರ ಇತ್ತು ಎಂಬ ಆರೋಪದಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ನಗರ ಪೊಲೀಸ್ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು ಹಾಗೂ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗೆ ನೋಟಿಸ್ ನೀಡಲಾಗಿದೆ ಎಂದು ಶ್ಯಾಂಭಟ್ ತಿಳಿಸಿದ್ದಾರೆ.