Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರ: ಮೊಬೈಲ್ ಕಾರಣಕ್ಕೆ ಸಂಬಂಧಿಕನಿಂದಲೇ ಯುವಕನ ಬರ್ಬರ ಕೊಲೆ

Spread the love

Delhi Crime: गोकुलपुरी में चाकू मारकर 19 साल के लड़के की हत्या, दो सगे भाई  गिरफ्तार, प्रेम प्रसंग में हुआ मर्डर - delhi gokalpuri himanshu murder case  two brothers arrested ...

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್.ರಾಗುಟ್ಟಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಿಕ್ಕಪ್ಪ ಸಹೋದರನ ಮಗನ ತಲೆ ಮೇಲೆ ಕಲ್ಲು ಹಾಕಿ ಸಾಯಿಸಿರುವ ಘಟನೆ ನಡೆದಿದೆ.

ಗ್ರಾಮದ ಸುನಿಲ್ (29 ವರ್ಷ) ಮೃತಪಟ್ಟ ಯುವಕ.

ಆವರ ಚಿಕ್ಕಪ್ಪ ರಮೇಶ್ ಕೊಲೆ ಮಾಡಿರುವ ಆರೋಪಿ.

ಆರೋಪಿ ರಮೇಶನ ಮೊಬೈಲನ್ನು ಸುನಿಲ್ ತೆಗೆದುಕೊಂಡಿದ್ದು ಮತ್ತೆ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಭಾನುವಾರ (ಜೂ. 8) ಇಬ್ಬರ ನಡುವೆ ಜಗಳವಾಗಿತ್ತು. ರಾತ್ರಿ ಮಲಗಿದ್ದಾಗ ಸುನಿಲ್ ತಲೆಯ ಮೇಲೆ ರಮೇಶ್ ದೊಡ್ಡ ಸೈಜು ಕಲ್ಲು ಎತ್ತಿ ಹಾಕಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೀವ್ರವಾಗಿ ಗಾಯಗೊಂಡಿದ್ದ ಸುನಿಲ್ ನನ್ನು ಬಟ್ಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಸೇರಿಸಲಾಗಿತ್ತು.

ಮಂಗಳವಾರ (ಜೂ.10) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರಮೇಶ್ ಪರಾರಿಯಾಗಿದ್ದಾನೆ. ಬಟ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *