Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಎಂಟಿಸಿ ಬಸ್‌ನಲ್ಲಿ ‘ಚಪ್ಪಲಿ ತುರ್ತು ಸರ್‌ಪ್ರೈಸ್’ – ಮಹಿಳೆ ಕೋಪಕ್ಕೆ ತುತ್ತಾದ ಡ್ರೈವರ್!

Spread the love

ಬೆಂಗಳೂರು:ಬೆಂಗಳೂರಿನಲ್ಲಿದಿನೇ ದಿನೇ ಹೊಡೆದಾಟ ಬಡಿದಾಟಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರ ಮೇಲೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಬಸ್‌ ನಿಲ್ದಾಣವಲ್ಲದ ಸ್ಥಳದಲ್ಲಿ ಬಸ್ ನಿಲ್ಲಿಸಲು ಚಾಲಕ ನಿರಾಕರಿಸಿದ ಕಾರಣಕ್ಕೆ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಪದೇ ಪದೇ ಚಾಲಕರ ಮೇಲೆ ಹಲ್ಲೆ ನಡೆಯುತ್ತಿರುವ ಘಟನೆಗಳು ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ.  ಮಹಿಳೆ ಚಪ್ಪಲಿಯಿಂದ ಹೊಡೆದ ಘಟನೆಯಿಂದಾಗಿ ಸಾರ್ವಜನಿಕ ಸಾರಿಗೆಯ ಚಾಲಕರಿಗೆ ಎದುರಾಗುವ ಸವಾಲುಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಮಾಹಿತಿ ಪ್ರಕಾರ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ನ ಚಾಲಕ 42 ವರ್ಷದ ಅತಹರ್ ಹುಸೇನ್ ಮೇಲೆ ಕಾವ್ಯ ಎಂಬ 30 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕೈಕೊಂಡರಹಳ್ಳಿ ಬಸ್‌ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡ ಕಾವ್ಯ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ. ಆದರೆ, ಸಂಚಾರ ದಟ್ಟಣೆ ಮತ್ತು ನಿಯಮಗಳ ಕಾರಣದಿಂದ ಅತಹರ್ ಅವರು ಹೇಳಿದಂತೆ ನಿಲ್ಲಿಸಿಲ್ಲ. ನಂತರ  ಆ ಮಹಿಳೆ ಹೊಟ್ಟೆನೋವಿನಿಂದ ಕಿರುಚಿಕೊಂಡು ಬಸ್ ನಿಲ್ಲಿಸುವಂತೆ ಒತ್ತಾಯಿಸಿದ್ದಾಳೆ. ಇದಕ್ಕೆ ಸ್ಪಂದಿಸಿದ ಚಾಲಕ, ಬಲಕ್ಕೆ ತಿರುವು ತೆಗೆದುಕೊಂಡು ಬಸ್‌ನಿಲ್ಲಿಸಿದ್ದಾರೆ. ಈ ವೇಳೆ ಕಾವ್ಯ ತನ್ನ ಚಪ್ಪಲಿಯನ್ನು ತೆಗೆದುಕೊಂಡು ಅತಹರ್ ಮೇಲೆ ಹಲ್ಲೆ ನಡೆಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಈ ಘಟನೆಯಿಂದ ಆಘಾತಗೊಂಡ ಚಾಲಕ, ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕಾವ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 121, 131, 132 ಮತ್ತು 352ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಸಾರ್ವಜನಿಕ ಸಾರಿಗೆ ಚಾಲಕರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಸಾರಿಗೆ ಬಸ್​​ ಚಾಲಕರಿಗೆ ಸುರಕ್ಷತೆಯೇ ಇಲ್ವಾ?

ಬಿಎಂಟಿಸಿ ಚಾಲಕರು ದಿನನಿತ್ಯ ಸಂಚಾರ ದಟ್ಟಣೆ, ಪ್ರಯಾಣಿಕರ ಒತ್ತಡ ಮತ್ತು ಕರ್ತವ್ಯದ ನಿಯಮಗಳ ನಡುವೆ ಕೆಲಸ ನಿರ್ವಹಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಪ್ರಯಾಣಿಕರಿಂದ ದಾಳಿಗೊಳಗಾಗುವುದು ಅವರ ಕೆಲಸದ ಸವಾಲುಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಕುರಿತು ತೀವ್ರ ಚರ್ಚೆ ನಡೆದಿದ್ದು, ಕೆಲವರು ಚಾಲಕನ ನಿರಾಕರಣೆಯನ್ನು ಸಮರ್ಥಿಸಿದ್ದಾರೆ, ಇನ್ನೂ ಕೆಲವರು ಆ ಮಹಿಳೆ ಕ್ರಮವನ್ನು ಖಂಡಿಸಿದ್ದಾರೆ.

ಚಾಲಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ!

ಬಿಎಂಟಿಸಿ ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಚಾಲಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ. ಈ ಘಟನೆಯಿಂದಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶಿಸ್ತು, ಸಹನೆ ಮತ್ತು ಸುರಕ್ಷತೆಯ ಅಗತ್ಯತೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆಯಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಇಂತಹ ಘಟನೆಗಳ ಮರುಕಳಿಕೆ ತಡೆಗೆ ಕಾನೂನು ಕ್ರಮದ ಜೊತೆಗೆ ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *