Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನ ಅಸ್ವಸ್ಥ, ಇಬ್ಬರು ಪಿಡಿಒಗಳು ಅಮಾನತು

Spread the love

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ

ರಾಯಚೂರು, ಜೂನ್​ 14: ಕಲುಷಿತ ನೀರು (Polluted water) ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್​ನಿಂದ​ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ವಿರುದ್ಧ ಭೂತಲದಿನ್ನಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿದರು.

ಪಿಡಿಒ ಅಮಾನತು

ಕರ್ತವ್ಯ ಲೋಪ ಹಾಗೂ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮ ಪಂಚಾಯಿತಿ ಪಿಡಿಒ ಶಿವರಾಜು ಮತ್ತು ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರು 26,71,303 ರೂ. ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಅಮಾನತು ಮಾಡಲಾಗಿದೆ.  52.81 ಲಕ್ಷ ಮೊತ್ತದ ಅಪೂರ್ಣ ದಾಖಲೆ ನೀಡಿದ್ದ ಪಿಡಿಒ ಶಿವರಾಜ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *