Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನ ಟ್ರಾಫಿಕ್ ದರ್ಶನ: 12 ಕಿ.ಮೀ. ಪ್ರಯಾಣಕ್ಕೆ 3 ಗಂಟೆ 15 ನಿಮಿಷ!

Spread the love

Bengaluru Traffic News: बेंगलुरु में लगा महाजाम! 12 किमी का सफर 3 घंटे में  पूरा, सड़कों पर घंटों रेंगती रही गाड़ियां - bengaluru traffic jam news 3  hours for 12 km without

ಬೆಂಗಳೂರು ಟ್ರಾಫಿಕ್ ಬಹಳ ದೊಡ್ಡ ಸಮಸ್ಯೆಯಾಗಿದೆ. ಅದರೂ ಬೆಂಗಳೂರಿಗರು ಇದಕ್ಕೆ ಹೊಂದಿಕೊಳ್ಳಬೇಕು. ಇದು ಅನಿವಾರ್ಯ ಕೂಡ ಹೌದು. ಬೆಂಗಳೂರು ಟ್ರಾಫಿಕ್ ಬಗ್ಗೆ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ.

ಅದೇ ರೀತಿ ಬೆಂಗಳೂರು ಟ್ರಾಫಿಕ್ನಿಂದ ತಾನು ಪಟ್ಟಪಾಡನ್ನು ಇಲ್ಲೊಬ್ಬ ವ್ಯಕ್ತಿ ವಿವರಿಸಿದ್ದಾರೆ. ರೆಡ್ಡಿಟ್ನ್ಲಲಿ @AverageGamer411 ಎಂಬ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಕುಖ್ಯಾತ ಸಮಸ್ಯೆಯೆಂದರೆ ಅದು ಟ್ರಾಫಿಕ್, ನನ್ನ ಮನೆಗೆ ಆಫೀಸ್ನಿಂದ ಇರುವುದು 12 ಕಿಲೋ ಮೀಟರ್ ದೂರ, ನಾನು ಆಫೀಸ್ನಿಂದ ಸಂಜೆ 6 ಗಂಟೆಗೆ ಬಿಟ್ಟಿದ್ದೇನೆ, ಆದರೆ ಮನೆಗೆ ಬಂದು ತಲುಪಿದ್ದು ರಾತ್ರಿ 9:15 ಕ್ಕೆ, ಕೇವಲ 12 ಕಿಲೋ ಮೀಟರ್ ದಾರಿಗೆ ನಾನು ಇಷ್ಟು ಸಮಯ ತೆಗೆದುಕೊಳ್ಳಬೇಕಾಗಿತ್ತು ಎಂದು ಹೇಳಿದ್ದಾರೆ.

ಒಂದು ವೇಳೆ ಮಳೆ, ಪ್ರತಿಭಟನೆ, ಅಪಘಾತದಂತಹ ಘಟನೆ ಏನಾದರೂ ಆದ್ರೆ ಹೌದು ಟ್ರಾಫಿಕ್ ಆಗುವುದು ಸಹಜ, ಆದರೆ ಇದು ಯಾವುದು ಅವತ್ತು ನಡೆದಿಲ್ಲ. ಈ ಕಾರಣಕ್ಕೆ ಬೆಂಗಳೂರು ಅಂದ್ರೆ ಬೆಂಗಳೂರು ಅಷ್ಟೇ ಎಂದು ಹೇಳುವುದು ಎಂದು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗುತ್ತಿದೆ. ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ 800 ಕ್ಕೂ ಹೆಚ್ಚು ಲೈಕ್, ಕಮೆಂಟ್ಗಳು ಬಂದಿದೆ. ಈ ಬಗ್ಗೆ ಮುಂದುವರಿಸಿದ ಈ ವ್ಯಕ್ತಿ, ನಾನು ಬಸ್ನಲ್ಲಿ ಹೋಗಬೇಕಿತ್ತು. ಆದರೆ ಅವತ್ತು ಯಾಕೋ ಗೊತ್ತಿಲ್ಲ ನಮ್ಮ ರೂಟ್ಗೆ ಹೋಗಬೇಕಿದ್ದ ಬಸ್ ಬರಲೇ ಇಲ್ಲ. ಕಾದು ಕಾದು ಸಾಕಾಯಿತು, ಕೊನೆಗೂ ಒಂದು ಬಸ್ ಬಂತು. ಆದರೆ ಈ ಬಸ್‌ನಲ್ಲಿ ಮಧ್ಯೆದಲ್ಲೇ ಸಮಸ್ಯೆಯಾಗಿದೆ ಎಂದು ಹೇಳಿ ಇಳಿಸಿದ್ರು, ಕೊನೆಗೆ ಬೇರೆ ದಾರಿ ಇಲ್ಲವೆಂದು ನಮ್ಮ ಯಾತ್ರಾದಲ್ಲಿ ಆಟೋ ಬುಕ್ ಮಾಡಲು ಮುಂದಾದೇ, ಆದರೆ ಅದರಲ್ಲಿ ಆಟೋಗೆ 50 ರೂ. ಟಿಪ್ ನೀಡಬೇಕು. ಈ ಟಿಪ್ ಎಂಬ ವಿಚಾರ ತುಂಬಾ ತಮಾಷೆಯಾಗಿದೆ ಎಂದು ನನಗೆ ಅನಿಸುತ್ತದೆ.

ಇನ್ನು ಆಟೋದಲ್ಲಿ ಹೋಗುವುದು ನನಗೆ ಅನಿವಾರ್ಯ, ಆಟೋ ಹತ್ತಿಕೊಂಡು ಮನೆಗೆ ಬಂದೇ, ಬಂದು ತಲುಪುವಾಗ 9.15 ಆಗಿದೆ. ಆದ್ರೆ ನನ್ನ ಪ್ರಶ್ನೆ ಈ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಇಲ್ವಾ? ಯಾಕೆ ಟ್ರಾಫಿಕ್ ಆಗುತ್ತಿದೆ. ದೇಶದ ನವೋದ್ಯಮ ರಾಜಧಾನಿ ಆಗಬೇಕಾದ ಬೆಂಗಳೂರಿನಲ್ಲಿ ಇಂತಹ ಘಟನೆಗಳು ನಡೆಯಲು ಕಾರಣ ಏನೆಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಇನ್ನು ಆಫೀಸ್ಗೆ ಹೋಗುವಾಗ ಕೂಡ ಈ ಸಮ್ಯಸ್ಯೆಯನ್ನು ಎದುರಿಸುತ್ತೇವೆ. ಆಗ ಕಾರಿನಲ್ಲಿ ಅಥವಾ ಆಟೋದಲ್ಲಿ ಕೆಲಸ ಮಾಡುತ್ತಾ ಹೋಗುತ್ತೇವೆ. ಆದರೆ ಸಂಜೆ ಆಫೀಸ್ ಬಿಡುವಾಗ ಮಾತ್ರ ಟ್ರಾಫಿಕ್ ಯುದ್ಧಕ್ಕೆ ನಿಂತಿರುವ ರೀತಿ ಕಾಣುತ್ತದೆ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಅನೇಕರು ರೆಡ್ಡಿಟ್‌ನಲ್ಲಿ ಕಮೆಂಟ್ ಮಾಡಿದ್ದಾರೆ. ಟ್ರಾಫಿಕ್ ವಿಚಾರಕ್ಕೆ ಬಂದರೆ ಇದಕ್ಕೆಲ್ಲ ಸರ್ಕಾರವೇ ಕಾರಣ, ಬೈಕ್ ಟ್ಯಾಕ್ಸಿಗಳನ್ನು ಸಹ ರದ್ದು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮತ್ತೊಬ್ಬ ಬಳಕೆದಾರ, ಈ ನಗರದ ದೊಡ್ಡ ಪ್ರಮಾದವೆಂದರೆ ಹೆಚ್ಚು ಜನದಟ್ಟಣೆ ಇರುವ ಸ್ಥಳಗಳಿಗೆ ಮೆಟ್ರೋ ಸಂಪರ್ಕವಿಲ್ಲ ಎಂದು ಹೇಳಿದ್ದಾರೆ. ಮೊದಲು ಸಂಚಾರ ಸಮಸ್ಯೆ ಮಾತ್ರ ಇತ್ತು. ಈಗ ಸಂಚಾರ ಮತ್ತು ಸಾರಿಗೆ ಸೌಲಭ್ಯವೂ ಇದೆ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಇನ್ನೊಬ್ಬ ರಸ್ತೆಯ ಪರಿಸ್ಥಿತಿ ಶೋಚನೀಯವಾಗಿದೆ, ವಿಶೇಷವಾಗಿ ಬೆಳ್ಳಂದೂರು ಮತ್ತು ಮಾರತಹಳ್ಳಿ ಕಡೆಗೆ ಹೋಗುವ ಸರ್ವಿಸ್ ರಸ್ತೆಗಳಲ್ಲಿ ನರಕದಂತೆ ಆಗಿದೆ ಎಂದು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *