Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರೀತಿಸಿ, ಗರ್ಭಿಣಿ ಮಾಡಿ ಮದುವೆಗೆ ನಿರಾಕರಣೆ – ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

Spread the love

Rape accused in 2022 case assaulted 2 others: Delhi Police | Latest News  Delhi - Hindustan Times

ಪುತ್ತೂರು: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾದ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಬಪ್ಪಳಿಗೆ ನಿವಾಸಿ ಬಿಜೆಪಿ ಮುಖಂಡ ಬಿಜೆಪಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.

ರಾವ್(21) ವಿರುದ್ಧ ಪ್ರಕರಣ ದಾಖಲಾಗಿದೆ. 21 ವರ್ಷದ ಸಂತ್ರಸ್ತೆ ಕೂಡ ಪುತ್ತೂರು ನಿವಾಸಿಯಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ. 2025ರ ಜನವರಿಯಲ್ಲಿ ಮತ್ತೊಮ್ಮೆ ದೈಹಿಕ ಸಂಪರ್ಕ ಬೆಳೆಸಿದ್ದು, ಇದರಿಂದ ಯುವತಿ ಗರ್ಭಿಣಿಯಾಗಿದ್ದಳು.

ವಿಚಾರವನ್ನು ಪೋಷಕರಿಗೆ ತಿಳಿಸಿದಾಗ ಅವರು ಯುವಕನ ಮನೆಯವರಿಗೆ ಹೇಳಿದ್ದಾರೆ. ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದಾರೆ. ಆದರೆ, ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎನ್ನಲಾಗಿದ್ದು, ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *