Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೃಹತ್ ಬ್ಯಾಂಕ್ ದರೋಡೆ ಭೇದಿಸಿದ ವಿಜಯಪುರ ಪೊಲೀಸರು: ದಾರಿ ತಪ್ಪಿಸುವ ಯತ್ನಗಳ ನಡುವೆಯೂ ಆರೋಪಿಗಳ ಬಂಧನ!

Spread the love

ವಿಜಯಪುರ | ಬ್ಯಾಂಕ್‌ನಿಂದ 58 ಕೆ.ಜಿ ಚಿನ್ನಾಭರಣ ದರೋಡೆ ಪ್ರಕರಣ: ಮ್ಯಾನೇಜರ್​ ಸೇರಿ ಮೂವರ ಬಂಧನ

ವಿಜಯಪುರ : ಕಳೆದ ತಿಂಗಳು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ.

ಈ ಸಂಬಂಧ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಹೇಳಿದರು.

ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು.

ಆರೋಪಿಗಳ ಬಳಿ ಇದ್ದ 10.75 ಕೋಟಿ ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿ ಹಾಗೂ ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನ ಲಾಕರ್ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ ಬಂಗಾರದ ಆಭರಣಗಳು ಹಾಗೂ ರೂ. 5,20,450 ನಗದು ದರೋಡೆಯಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *