Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ 9 ಬಡವರ ಹಕ್ಕುಪತ್ರ ನಾಪತ್ತೆ: ಮುಖ್ಯಾಧಿಕಾರಿಯಿಂದ ದೂರು, ಸಾರ್ವಜನಿಕರಲ್ಲಿ ಆಕ್ರೋಶ!

Spread the love

ಗುಡಿಬಂಡೆ: ಪಟ್ಟಣ ಪಂಚಾಯಿತಿಯಿಂದ ಬಡವರಿಗೆ ನೀಡಿದ ಖಾಲಿ ನಿವೇಶನಗಳ ಹಕ್ಕು ಪತ್ರಗಳಲ್ಲಿ 9 ಹಕ್ಕುಪತ್ರಗಳು ಮುಖ್ಯಾಧಿಕಾರಿ ಗಮನಕ್ಕೆ ಬಾರದೆ ನಾಪತ್ತೆಯಾಗಿದೆ.

ಇತ್ತೀಚೆಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ಸುಮಾರು 10 ವರ್ಷದ ಹಿಂದೆ ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡವರಿಗೆ ನಿವೇಶನ ನೀಡುವ ಸಲುವಾಗಿ ಬ್ರಾಹ್ಮಣರಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಸಮೀಪದಲ್ಲಿ ಸರ್ಕಾರಿ ಜಮೀನು ಗುರುತಿಸಿ ನಿವೇಶನಗಳನ್ನು ವಿಂಗಡಿಸಿ ಸುಮಾರು 58 ಹಕ್ಕುಪತ್ರದಲ್ಲಿ 40 ಜನರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಿದ್ದರು

ವಿತರಣೆಯಾಗದ ಹಕ್ಕುಪತ್ರಗಳನ್ನು ಮುಖ್ಯಾಧಿಕಾರಿ ತಮ್ಮ ಕಚೇರಿಯಲ್ಲಿಯೇ ಇಟ್ಟುಕೊಂಡಿದ್ದು, ಈಗ 9 ಹಕ್ಕುಪತ್ರಗಳು ಕಚೇರಿಯಿಂದ ನಾಪತ್ತೆಯಾಗಿದೆ.

ಠಾಣೆಗೆ ದೂರು: ಹಕ್ಕುಪತ್ರಗಳು ಕಚೇರಿಯಿಂದ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಾಧಿಕಾರಿ ಸಬಾಶಿರಿನ್ ಗುರುವಾರ ಗುಡಿಬಂಡೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ನಿವೃತ್ತ ಸಿಬ್ಬಂದಿ ಶ್ರೀನಿವಾಸ್ ಎಂಬುವವರು ಹಕ್ಕುಪತ್ರ ಇರುವ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ನೀಡಿಲ್ಲ. ಕೂಡಲೇ ಅವರನ್ನು ಠಾಣೆಗೆ ಕರೆಸಿ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದೂರು ನೀಡಿದ್ದಾರೆ.

ನಿವೃತ್ತಿಯಾದರು ಕೆಲಸ: ಹಕ್ಕುಪತ್ರ ಕಡತಗಳನ್ನು ನಿರ್ವಹಿಸುತ್ತಿದ್ದ ಸಿಬ್ಬಂದಿ ಶ್ರೀನಿವಾಸ್ ನಿವೃತ್ತಿಯಾಗಿ ಸುಮಾರು ತಿಂಗಳೇ ಕಳೆದಿದೆ. ಆದರೂ ಅವರು ಕಚೇರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು.

ವಿತರಣೆಯಾಗದ ಹಕ್ಕುಪತ್ರಗಳನ್ನು ಕಚೇರಿ ಸಿಬ್ಬಂದಿ ಹಣಕ್ಕೆ ಮಾರಾಟ ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಉತ್ತರಿಸದ ಮುಖ್ಯಾಧಿಕಾರಿ: ಹಕ್ಕುಪತ್ರ ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಮುಖ್ಯಾಧಿಕಾರಿ ಸಬಾಶಿರನ್ ಪ್ರತಿಕ್ರಿಯಿಸಿ, ‘ನಾನು ಯಾವುದೇ ಹೇಳಿಕೆ ನೀಡಲು ಆಗುವುದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ಶಾಸಕರ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು.

ವಸತಿ ಕಳೆದುಕೊಂಡವರಿಗೆ ಶಾಸಕರು ಹಕ್ಕುಪತ್ರವನ್ನು ವಿತರಣೆ ಮಾಡುತ್ತಿರುವುದು-ರಾಜೇಶ್, ಪಟ್ಟಣ ಪಂಚಾಯಿತಿ ಎರಡನೇ ವಾರ್ಡ್‌ ಸದಸ್ಯಕಚೇರಿಯಲ್ಲಿ ಹಕ್ಕುಪತ್ರಗಳು ನಾಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಕೂಡಲೇ ಸಂಬಂಧಪಟ್ಟ ತಪ್ಪಿತಸ್ಥ ಸಿಬ್ಬಂದಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.


Spread the love
Share:

administrator

Leave a Reply

Your email address will not be published. Required fields are marked *