Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾವ-ಅಳಿಯ ಜಗಳ: ಮಧ್ಯೆ ಹೋಗಿ ಗಾಯಗೊಂಡ ಪೊಲೀಸ್ ಪೇದೆ – ರಾಜಕೀಯ ತಿರುವು ಪಡೆದ ಕೊಲೆ ಪ್ರಕರಣ

Spread the love

ಬೆಂಗಳೂರು: ಮಾವ ಮತ್ತು ಅಳಿಯನ ಜಗಳದಲ್ಲಿ ಮಧ್ಯೆ ಹೋದ ಪೊಲೀಸ್​ ಪೇದೆಗೆ ಚಾಕುವಿನಿಂದ ಇರಿದ ಘಟನೆ ಚಾಮರಾಜಪೇಟೆಯ ವಾಲ್ಮೀಕಿ ನಗರದಲ್ಲಿ ಶನಿವಾರ (ಜು.26) ರಾತ್ರಿ ನಡೆದಿದೆ. ಅಳಿಯ ತಬ್ರೇಜ್, ಮಾವ ಮೊಹಮ್ಮದ್ ಶಫೀವುಲ್ಲಾ ಮಧ್ಯೆ ಜಗಳ ನಡೆದಿತ್ತು. ತಬ್ರೇಜ್ ಪಾಷಾನು ತನ್ನ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದನು. ಹೀಗಾಗಿ, ಶಫೀವುಲ್ಲಾ ತನ್ನ ಮಗಳಿಗೆ ಬೇರೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದರು. ಇದರಿಂದ ಸಿಟ್ಟಾದ ತಬ್ರೇಜ್ ಮತ್ತು ಈತನ ಸಂಬಂಧಿಕರು ಶಫೀವುಲ್ಲಾ ಜೊತೆ ಜಗಳ ತೆಗೆದಿದ್ದಾರೆ. ಗಲಾಟೆಯಲ್ಲಿ ಅಳಿಯ ತಬ್ರೇಜ್​ನು ಮಾವ ಶಫೀವುಲ್ಲಾಗೆ ಬಾಟಲ್‌ನಿಂದ ತಲೆಗೆ ಹೊಡೆದಿದ್ದಾನೆ.

ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹತಿ ತಿಳಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ, ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿ ತಬ್ರೇಜ್​ ಡ್ಯಾಗರ್‌ನಿಂದ ಪೊಲೀಸ್​ ಪೇದೆ ಸಂತೋಷ್‌ಗೆ ಇರಿದಿದ್ದಾನೆ. ಕೂಡಲೇ ಪೇದೆ ಸಂತೋಷ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಳಿಯ ತಬ್ರೇಜ್​ ವಿರುದ್ಧ ಮಾವ ಶಫೀವುಲ್ಲಾ ಚಾಮರಾಜಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳಾದ ತಬ್ರೇಜ್ ಮತ್ತು ಅಬ್ರೇಜ್​ ಸೇರಿದಂತೆ ನಾಲ್ವರನ್ನು ಬಂಧಸಿದ್ದಾರೆ.

ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಪ್ರಕರಣದ ಎ1 ಶ್ರೀನಿವಾಸ್ ಬಿಜೆಪಿ ಪಕ್ಷದಲ್ಲಿ ಸಕ್ರಿಯನಾಗಿದ್ದಾನೆ. ರಾಜಕೀಯ ದ್ವೇಷಕ್ಕೆ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ಗ್ರಾ.ಪಂ ಮಾಜಿ ಅಧ್ಯಕ್ಷ ನಂಜೇಶ್​ನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡ ಅಚ್ಚಲು ಕುಮಾರ್ ಮೇಲೆ ಕಾಂಗ್ರೆಸ್ ಮುಖಂಡ ದೊಡ್ಡಾಲಹಳ್ಳಿ ಕೃಷ್ಣಪ್ಪ ಹಾಗೂ ಸಹಚರರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಅಂತ್ಯಕ್ರಿಯೆ ನೆರವೇರಿತು.

“ಸ್ನೇಹಿತನ ಅಂತ್ಯಸಂಸ್ಕಾರಕ್ಕೆ ಬಂದಿದ್ದಕ್ಕೆ ಹೊಡೆದಿದ್ದಾರೆ. ರಾಜಕೀಯ ಬೇರೆ, ಸ್ನೇಹ ಬೇರೆ. ಈ ರೀತಿ ಮಾಡುವುದು ಏಕೆ? ಬಿಜೆಪಿ ಮುಖಂಡ, ಗ್ರಾ. ಪಂ ಸದಸ್ಯ ಅಚ್ಚಲು ಕುಮಾರ್ ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *