Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತುಮಕೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ₹10 ಸಾವಿರಕ್ಕೆ ಮಂಚಕ್ಕೆ ಕರೆದ ಪ್ರಾಂಶುಪಾಲನ ಬಂಧನ!

Spread the love

ತುಮಕೂರು: ಗುರುಗಳನ್ನು, ಅಕ್ಷರ ಕಲಿಸುವ ಶಿಕ್ಷಕರನ್ನು ‘ಗುರು ಬ್ರಹ್ಮ .. ಗುರು ವಿಷ್ಣು .. ಗುರು ದೇವೋ ಮಹೇಶ್ವರ: .. ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ಅಂತ ಕೈಮುಗೀತಾರೆ. ತಾಯಿಮಗುವಿಗೆ ಜೀವ ಕೊಟ್ಟರೆ, ಗುರು ಹೊಸ ಜೀವನ ಕೊಡುತ್ತಾನೆ

ಇಂತಹ ಮಹತ್ವದ ಸ್ಥಾನದಲ್ಲಿರುವ ಗುರು ಇನ್ನೊಬ್ಬರಿಗೆ ಮಾದರಿಯಾಗಿ ಇರಬೇಕು. ಆದರೆ ಆತನೇ ತಪ್ಪು ಮಾಡಿದ್ರೆ ಏನಾಗುತ್ತದೆ? ಹೌದು ಹತ್ತು ಸಾವಿರ ಕೊಡ್ತೀನಿ ಬಾ ಎಂದು ಯುವತಿಯನ್ನು ಮಂಚಕ್ಕೆ ಕರೆದ ಪ್ರಿನ್ಸಿಪಾಲ್‍ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಆರೋಪಿ ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾದ್ಯಾಪಕನಾಗಿದ್ದ. ಈ ಸಮಯದಲ್ಲಿ ಆರೋಪಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.

ಸಂತ್ರಸ್ತೆ ಕಾಲೇಜು ಬಿಟ್ಟರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಇದಾದ ಬಳಿಕ ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್‌ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ.

ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ. ಈ ವಿಚಾರವನ್ನು ಸಂತ್ರಸ್ತೆ ತಂದೆಗೆ ತಿಳಿಸಿದ್ದಳು. ಬಳಿಕ ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *