Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಡಿಕೆಶಿ, ಫೇಸ್‌ಬುಕ್‌ ಖಾತೆ ನಿರ್ವಾಹಕರ ವಿರುದ್ಧ ದೂರು.

Spread the love

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಸಿ.ಟಿ.ರವಿ, ಸುನೀಲ್‌ ಕುಮಾರ್‌ ಹಾಗೂ ಸಂಸದ ಪ್ರತಾಪ್‌ ಸಿಂಹ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೂ ಆದ ಡಿ. ಕೆ.ಶಿವಕುಮಾರ್‌ ಮತ್ತು ಅವರ ಫೇಸ್‌ಬುಕ್‌ ಖಾತೆಯ ನಿರ್ವಾ‌ಹಕರ ವಿರುದ್ಧ ಬಿಜೆಪಿ ಕಾನೂನು ಘಟಕದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಎಂಬವರು ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಾಂಗ್ರೆಸ್‌ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ಮಾರ್ಫ್ ಮಾಡಿದ ಫೋಟೋಗಳನ್ನು ಬಳಸಿ ತಿರುಚಿದ ಹಾಗೂ ದಾರಿತಪ್ಪಿಸುವ ಸುಳ್ಳು ಪೋಸ್ಟ್‌ಗಳನ್ನು ಹಾಕಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದ ಜನರಲ್ಲಿ ದ್ವೇಷ ಹುಟ್ಟಿಸಲು ಹಾಗೂ ಬಿಜೆಪಿ ನಾಯಕರ ಹೆಸರಿಗೆ ಮಸಿ ಬಳಿಯಲು ಯತ್ನಿಸಲಾಗಿದೆ. ಈ ರೀತಿಯ ಫೋಸ್ಟ್‌ಗಳು ಬಿಜೆಪಿ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವ ಮತ್ತು ಶಾಂತಿಗೆ ಭಂಗ ತರುವ ಉದ್ದೇಶ ಹೊಂದಿದೆ. ಇದು ಕೆಲ ವರ್ಗದ ಜನರನ್ನು ಉದ್ವಿಘ್ನಗೊಳಿಸುತ್ತದೆ. ಈ ರೀತಿ ಗೊಂದಲ ಉಂಟುಮಾಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಅವರ ಫೇಸ್‌ಬುಕ್‌ ಪೇಜ್‌ ನಿರ್ವಹಿಸುವ ವ್ಯಕ್ತಿಗಳಿಗೆ ಗೊತ್ತಿದ್ದರೂ, ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರಿಂದ ಶಿವಕುಮಾರ್‌ ಹಾಗೂ ಅವರ ಫೇಸ್‌ಬುಕ್‌ ಪೇಜ್‌ ನಿರ್ವಹಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯೋಗೇಂದ್ರ ಹೂಡಘಟ್ಟ ದೂರಿನಲ್ಲಿ ಆರೋಪಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *