Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿಕ್ಕಬಳ್ಳಾಪುರ ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್–ಬಿಜೆಪಿ ಬೆಂಬಲಿಗರ ನಡುವೆ ದೂರು–ಪ್ರತಿದೂರು ಜಟಾಪಟಿ

Spread the love


ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಜೋರಾಗಿದೆ.

ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್ ವಾರ್ ನಡೆದಿತ್ತು. ಇದೀಗ ಘಟನೆ ಸಂಬಂಧಿಸಿದಂತೆ ಸಂಸದ ಸುಧಾಕರ್ ಬೆಂಬಲಿಗ, ಮುನಿರಾಜು ಎಂಬಾತ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರಾದ ವಿನಯ್ ಬಂಗಾರಿ, ಹಮೀಮ್, ಸುಧಾಕರ್, ದೀಪು, ಸಲೀಂ ವಿರುದ್ಧ ಅವಾಚ್ಯ ಶಬ್ದಗಳಿಂದ ಜಾತಿನಿಂದನೆ ಮಾಡಿದ ಆರೋಪದಡಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಶಾಸಕ ಪ್ರದೀಪ್‌ ಈಶ್ವರ್‌ ಬೆಂಬಲಿಗರ ವಿರುದ್ಧ ಆಟ್ರಾಸಿಟಿ ಕೇಸ್ ದಾಖಲಾಗಿದೆ.

ಸುಧಾಕರ್ ಬೆಂಬಲಿಗರ ವಿರುದ್ಧವೂ ಪ್ರತಿದೂರು
ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರ ವಿರುದ್ಧ ದೂರು ದಾಖಲಾಗ್ತಿದ್ದಂತೆ ಇತ್ತ ಸಂಸದ ಸುಧಾಕರ್ ಬೆಂಬಲಿಗರ ವಿರುದ್ಧವೂ ದೂರು ದಾಖಲಿಸಲಾಗಿದೆ. ಸಂಸದ ಸುಧಾಕರ್ ಬೆಂಬಲಿಗರಾದ ನಗರಸಭೆ ಅಧ್ಯಕ್ಷ ಗಜೇಂದ್ರ ಆತನ ಸಹೋದರ ರವಿ, ಅತ್ತಿಗೆ ಶೋಭಾ ಸೇರಿ ಮುನಿರಾಜು ವಿರುದ್ಧ ದೂರು ದಾಖಲು ಮಾಡಲಾಗಿದೆ. 

ಪ್ರದೀಪ್ ಈಶ್ವರ್ ಬೆಂಬಲಿಗ ಮೊಹಮ್ಮದ್‌ ಹಮೀಮ್ ಎಂಬಾತ ಹಲ್ಲೆ ಮಾಡಿ ಪ್ರಾಣ ಬೆದರಕೆ ಹಾಕಿರುವುದಾಗಿ ದೂರು ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಎರಡು ಕಡೆ ದೂರು ಹಾಗೂ ಪ್ರತಿದೂರುಗಳು ದಾಖಲಾಗಿವೆ.


Spread the love
Share:

administrator

Leave a Reply

Your email address will not be published. Required fields are marked *