Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಾವಿ ಬಿಮ್ಸ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಬೆಳಗಾವಿ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಬಿಮ್ಸ್ ನ ವಸತಿ ನಿಲಯದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಬಿಮ್ಸ್ (BIMS Belagavi) ನಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿದ್ಯಾರ್ಥಿನಿ ಪ್ರಿಯಾ (27) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಸೋಮವಾರ ಸಂಜೆಯವರೆಗೂ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ತಪಾಸಣೆ ಕುರಿತು ಅಧ್ಯಯನ ಮಾಡಿದ್ದ ಪ್ರಿಯಾ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಪ್ರಿಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಳು. ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದು ಬಂದಿತ್ತು. ಆಕೆ ಅಧಿಕ ಪ್ರಮಾಣದಲ್ಲಿ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಲಿದೆ ಎಂದು ಎಂದು ತಿಳಿಸಿದರು‌.
ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಪ್ರಕರಣದಲ್ಲಿ ಹಿಂದಿ ಚಿತ್ರರಂಗದ (Bollywood) ಹಿರಿಯ ನಟ ಅಚ್ಯುತ್ ಪೋತದಾರ್ ( Achyut Potdar) ವಯೋ ಸಹಜ ಕಾಯಿಲೆಯಿಂದಾಗಿ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ 91 ವರ್ಷದ ಅವರನ್ನು ಈ ಹಿಂದೆ ಥಾಣೆಯ (Thane) ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಇಹಲೋಕ ತ್ಯಜಿಸಿದ್ದಾರೆ.

ಅಮೀರ್ ಖಾನ್ ಅವರ 3 ಈಡಿಯಟ್ಸ್ ನಲ್ಲಿ ಕಟ್ಟುನಿಟ್ಟಾದ ಪ್ರಾಧ್ಯಾಪಕನ ಪಾತ್ರಕ್ಕಾಗಿ ಅವರು ವ್ಯಾಪಕವಾಗಿ ಜನಪ್ರಿಯರಾಗಿದ್ದ ಅಚ್ಯುತ್ ಪೋತದಾರ್ ಅವರು ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಜೊತೆಗೆ ಹಿಂದಿ ಮತ್ತು ಮರಾಠಿ ಚಿತ್ರರಂಗದಾದ್ಯಂತ 125 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ರಾಜ್‌ಕುಮಾರ್ ಹಿರಾನಿಯವರ ಬ್ಲಾಕ್‌ಬಸ್ಟರ್ ಚಲನಚಿತ್ರ 3 ಈಡಿಯಟ್ಸ್‌ನಲ್ಲಿ ಕಟ್ಟುನಿಟ್ಟಾದ ಎಂಜಿನಿಯರಿಂಗ್ ಪ್ರಾಧ್ಯಾಪಕನ ಪಾತ್ರವನ್ನು ನಿರ್ವಹಿಸುವ ಮೂಲಕ ಅವರು ಮನೆಮಾತಾದರು. ಅವರ ‘ಕೆಹ್ನಾ ಕ್ಯಾ ಚಾಹತೇ ಹೋ’ ಎಂಬ ಡೈಲಾಗ್ ಸೋಷಿಯಲ್ ಮೀಡಿಯಾದಲ್ಲಿ ಬಹಳ ಫೇಮಸ್ ಆಗಿದೆ.

ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಮತ್ತು ವಾಣಿಜ್ಯಿಕವಾಗಿ ಯಶಸ್ವಿಯಾದ ಆಕ್ರೋಶ್, ಆಲ್ಬರ್ಟ್ ಪಿಂಟೋ ಕೋ ಗುಸ್ಸಾ ಕ್ಯೋಂ ಆತಾ ಹೈ, ಅರ್ಧ ಸತ್ಯ, ತೇಜಾಬ್, ಪರಿಂದಾ, ರಾಜು ಬನ್ ಗಯಾ ಜಂಟಲ್‌ಮ್ಯಾನ್, ದಿಲ್ವಾಲೆ, ರಂಗೀಲಾ, ವಾಸ್ತವ್, ಹಮ್ ಸಾಥ್ ಸಾಥ್ ಹೇ, ಪರಿಣೀತಾ, ಲಗೇ ರಹೋ ಮುನ್ನಾಭಾಯಿ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಅಚ್ಯುತ ಪೋತದಾರ್ ತಮ್ಮ 44ನೇ ವಯಸ್ಸಿನಲ್ಲಿ ಸಿನಿಮಾ ಲೋಕಕ್ಕೆ ಪ್ರವೇಶಿಸಿದರು. ಪೋತದಾರ್ ಯಾವುದೇ ತರಬೇತಿ ಪಡೆದ ನಟರಲ್ಲ. ಪದವಿ ಪಡೆದ ನಂತರ ಅವರು ಮೊದಲು ಮಧ್ಯಪ್ರದೇಶದ ರೇವಾದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು.

ನಟನಾ ವೃತ್ತಿಯನ್ನು ಪ್ರಾರಂಭಿಸುವ ಮೊದಲು, ಅಚ್ಯುತ ಪೋತಾರ್ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತೀಯ ತೈಲ ಕಂಪನಿಯಲ್ಲಿ ಕೆಲಸ ಮಾಡಿದ್ದರು. ಅಂತಿಮವಾಗಿ, ಅವರು 80 ರ ದಶಕದಲ್ಲಿ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ಪ್ರಾರಂಭಿಸಿದರು.

ಇನ್ನೂ ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಅಪಾರ ಜನಪ್ರಿಯತೆ ಗಳಿಸಿದ್ದರು. ‘ಭಾರತ್ ಏಕ್ ಖೋಜ್’, ‘ಆಲ್ ದಿ ಬೆಸ್ಟ್’ (ದೂರದರ್ಶನ), ‘ಪ್ರಧಾನ ಮಂತ್ರಿ’ (ಝೀ ಟಿವಿ) ‘ಆಗ್ಲೆ ಜನಮ್ ಮೋಹೆ ಬಿತಿಯಾ ಹಿ ಕಿಜೋ’ (ಝೀ ಟಿವಿ), ‘ಆಹತ್ ಸೀಸನ್ 1’ (1995-2001) (ಸೋನಿ ಟಿವಿ), ‘ವಾಗ್ಲೆ ಕಿ ದುನಿಯಾ’, ‘ಮಜಾ ಹೋಶಿಲ್ ನಾ’ (ಝೀ ಮರಾಠಿ) ಸೇರಿದಂತೆ ಇನ್ನಿತರ ಧಾರಾವಾಹಿಗಳಲ್ಲಿ ನಟಿಸಿದ್ದರು.

ಸದ್ಯ ಹಿರಿಯ ನಟ ಅಚ್ಯುತ್ ಪೋತದಾರ್ ಅವರ ಅಂತ್ಯಕ್ರಿಯೆ ಆಗಸ್ಟ್ 19 ರಂದು ಥಾಣೆಯಲ್ಲಿ ನಡೆಯಲಿದ್ದು, ಗಣ್ಯಾತಿ ಗಣ್ಯರು, ಸೆಲೆಬ್ರಿಟಿಗಳು ರಾಜಕೀಯ ನಾಯಕರು, ಕುಟುಂಬಸ್ಥರು ಸೇರಿದಂತೆ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *