Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ: ಮಾಧ್ಯಮ ವರದಿ ನಿರ್ಬಂಧಿಸಲು ಸುಪ್ರೀಂ ಕೋರ್ಟ್‌ಗೆ ಮನವಿ

Spread the love

ದೆಹಲಿ (: ಯೆಮೆನ್ ದೇಶದ ಪ್ರಜೆಯನ್ನು ಕೊಲೆ ಮಾಡಿ ಮರಣದಂಡನೆಗೆ ಗುರಿಯಾಗಿರುವ ಮಲೆಯಾಳಿ ನರ್ಸ್ ಕೇರಳದ ನಿಮಿಷಾ ಪ್ರಿಯಾ ಅವರಿಗೆ ಇದೇ ಆಗಸ್ಟ್ ತಿಂಗಳ 24 ಅಥವಾ 25ನೇ ತಾರೀಖಿನಿಂದು ಮರಣದಂಡನೆ ಜಾರಿಯಾಗಲಿದೆ. ಆದ್ದರಿಂದ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಇವಾಂಜಲಿಸ್ಟ್ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ. ಕೆ.ಎ. ಪಾಲ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಸುವಾರ್ತಾಬೋಧಕ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್‌ನ ಸಂಸ್ಥಾಪಕ ಡಾ. ಕೆ.ಎ. ಪಾಲ್ ಅವರು, ಇದೇ ತಿಂಗಳ 24 ಅಥವಾ 25 ರಂದು ನಿಮಿಷಾ ಪ್ರಿಯಾ ಅವರ ಮರಣದಂಡನೆ ಜಾರಿಯಾಗಲಿದೆ. ಹೀಗಾಗಿ, ಮೂರು ದಿನಗಳ ಕಾಲ ಈ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಿಮಿಷಾ ಪ್ರಿಯಾ ಹೇಳಿಕೆಯ ಮೇರೆಗೆ ತಾವು ಕೋರ್ಟ್ ಮೊರೆ ಹೋಗಿರುವುದಾಗಿ ಪಾಲ್ ತಿಳಿಸಿದ್ದಾರೆ. ಅರ್ಜಿಯ ಕುರಿತು ಅಟಾರ್ನಿ ಜನರಲ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ನಿಮಿಷಾ ಪ್ರಿಯಾ ಪ್ರಕರಣದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಕೆ.ಎ. ಪಾಲ್, ತಮ್ಮ ಪ್ರಯತ್ನದಿಂದ ನಿಮಿಷಾ ಪ್ರಿಯಾ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದ್ದರು. ಮುಂದುವರೆದು, ನಿಮಿಷಾ ಪ್ರಿಯಾ ಬಿಡುಗಡೆಗೆ ಹಣ ಸಂಗ್ರಹಿಸಲು ಪಾಲ್ ಮುಂದಾಗಿದ್ದರು. ಇದಕ್ಕಾಗಿ ವಿದೇಶಾಂಗ ಸಚಿವಾಲಯದ ಹೆಸರಿನಲ್ಲಿ ಬ್ಯಾಂಕ್ ಖಾತೆ ಹಂಚಿಕೊಂಡು 8.3 ಕೋಟಿ ರೂ. ಅಗತ್ಯವಿದೆ ಎಂದು ಸಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡು ಪ್ರಚಾರವನ್ನೂ ಮಾಡಿದ್ದರು. ಆದರೆ, ಈ ಪ್ರಚಾರ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು. ವಿದೇಶಾಂಗ ಸಚಿವಾಲಯ ಕೂಡ ಈ ಹೇಳಿಕೆಯನ್ನು ಅಲ್ಲಗಳೆದಿತ್ತು. ಆದರೆ, ಈ ವೇಳೆ ಪಾಲ್ ಅವರಿಗೆ ವಿದೇಶಾಂಗ ಸಚಿವಾಲಯದ ಪೇ ಅಂಡ್ ಅಕೌಂಟ್ಸ್ ಅಧಿಕಾರಿಯ ಖಾತೆ ವಿವರಗಳು ಪಾಲ್‌ಗೆ ಹೇಗೆ ಸಿಕ್ಕವು ಎಂಬ ಪ್ರಶ್ನೆ ಎದ್ದಿತ್ತು.


Spread the love
Share:

administrator

Leave a Reply

Your email address will not be published. Required fields are marked *