ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬೀದಿ ನಾಯಿಗಳ ಹಾವಳಿ: ವಿದ್ಯಾರ್ಥಿ ಮೇಲೆ ದಾಳಿ, ಸ್ಥಳೀಯರ ಆಕ್ರೋಶ

ಬೆಂಗಳೂರು ನಗರದ ಮಲ್ಲೇಶ್ವರಂನ ಎಚ್.ಎನ್.ಲೇಔಟ್ನ 8ನೇ ಕ್ರಾಸ್ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಸಮಸ್ಯೆಯನ್ನು ತಂದೊಡ್ಡುತ್ತಿವೆ. ಕಳೆದ ಎರಡು ದಿನಗಳ ಹಿಂದೆ, ಶಾಲೆಗೆ ಸೈಕಲ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ ಐದು ನಾಯಿಗಳ ಗುಂಪು ದಾಳಿ ಮಾಡಿದೆ.

ಭೀಕರ ದಾಳಿಯಾಗುತ್ತಿರುವ ಸಂದರ್ಭದಲ್ಲಿ ಅಕ್ಕ ಪಕ್ಕದ ಮನೆಯವರ ಸಹಾಯದಿಂದ ವಿದ್ಯಾರ್ಥಿ ಬಚಾವಾಗಿದ್ದಾನೆ.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯರು, ಪ್ರತಿದಿನವೂ ನಾಲ್ಕೈದು ಜನರು, ಬೀದಿ ನಾಯಿಗಳ ದಾಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ವಾಹನಗಳನ್ನು ಬೆನ್ನಟ್ಟಿ ಬರುವುದು, ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದಿಂದ ಬಿದ್ದು ಕೆಲವರು ಗಾಯಗೊಂಡಿದ್ದಾರೆ, ಇನ್ನು ಕೆಲವರಿಗೆ ನಾಯಿ ಕಚ್ಚಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಬಿಬಿಎಂಪಿಗೆ ಹಲವಾರು ದೂರುಗಳನ್ನು ನೀಡಿದರೂ, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯ ನಿವಾಸಿ ಆರ್.ಎಸ್. ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿಗೆ ಸಂಬಂಧಿಸಿದಂತೆ, ಸ್ಥಳೀಯರು ನ್ಯಾಯಾಲಯದಲ್ಲಿ ಪಿಐಎಲ್ ದಾಖಲಿಸಲು ಮುಂದಾಗಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದಲ್ಲಿ ಕುಸಿತವಾಗಿದೆ. ಆದರೆ ಪ್ರತಿ ವರ್ಷ 40,000 ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಆದರೆ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದೆ, ಬೆಂಗಳೂರು ನಗರದ ಎಲ್ಲಾ ವಾರ್ಡ್ಗಳಲ್ಲಿ ಈ ಸಮಸ್ಯೆ ಸಮಾನ್ಯವಾಗಿದೆ.
ಇತ್ತೀಚೆಗೆ, ಪ್ರಶಾಂತ ನಗರದಲ್ಲಿ ನಾಯಿಗಳ ಗುಂಪು ದಾಳಿ ನಡೆಸಿದ್ದು, ಮಹ್ಮದ್ಅಲಿ ಮೈನುದ್ದಿನ್ಖಾನ್ ಎಂಬ ವಿದ್ಯಾರ್ಥಿ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023-24ನೇ ಸಾಲಿನಲ್ಲಿ, ಬೀದಿ ನಾಯಿಗಳ ಸಂಖ್ಯೆಯ ಹೆಚ್ಚಳ ಸಂಭವಿಸಬಹುದು, ಮತ್ತು 4 ತಿಂಗಳಿಂದ ಈ ಸಮಸ್ಯೆ ತೀವ್ರವಾಗಿದೆ. ಚಿಕ್ಕ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೀದಿ ನಾಯಿಗಳಿಂದ ಭಯದಿಂದ ಓಡಲು ಸಾಧ್ಯವಾಗುತ್ತಿಲ್ಲ.
ಬೀದಿ ನಾಯಿಗಳ ಕಾಟದಿಂದ ಬೈಕ್ ಸವಾರರು ರಸ್ತೆಯಲ್ಲಿ ಸಂಚರಿಸಲು ಕಷ್ಟಪಡುತ್ತಿದ್ದಾರೆ, ಮತ್ತು ಹಲವರು ಗಾಯಗೊಂಡಿದ್ದಾರೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿರುವ ಈ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಮಾತ್ರ ಇತ್ತೀಚೆಗೆ ನ್ಯಾಯಾಲಯ ನೀಡಿರುವ ಆದೇಶವನ್ನು ತೋರಿಸುತ್ತಿದ್ದಾರೆ.
ನ್ಯಾಯಾಲಯ ಏನು ಹೇಳಿತ್ತು?
ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಮಾಡಿ ಅವುಗಳನ್ನು ಮತ್ತೆ ಎಲ್ಲಿಂದ ತರಲಾಗಿತ್ತೋ ಅಲ್ಲಿಯೇ ಬಿಡಬೇಕು. ಹೆಚ್ಚು ಆಕ್ರಮಣಕಾರಿ ಬೀದಿ ನಾಯಿಗಳಿಗೆ ಒಂದು ವಾರ ನಿಗಾದಲ್ಲಿಟ್ಟು ನಂತರ ಬಿಡಬೇಕು ಎಂದು ಹೇಳಿತ್ತು. ಇದೇ ಆದೇಶವನ್ನು ಬಿಬಿಎಂಪಿ ಅಧಿಕಾರಿಗಳು ತೋರಿಸುತ್ತಿದ್ದಾರೆ. ಸಂತಾನಹರಣ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.