Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಾತಿಗಣತಿಗೆ ಅಡ್ಡಿ ಬಂದ ನೆಟ್‌ವರ್ಕ್: ಬೀದರ್‌ನಲ್ಲಿ ಜೀವ ಪಣಕ್ಕಿಟ್ಟು ಟ್ಯಾಂಕ್, ಮರವೇರಿ ಮಾಹಿತಿ ಸಂಗ್ರಹಿಸಿದ ಶಿಕ್ಷಕರು

Spread the love

ಬೀದರ್​​: ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಮಹತ್ವ ಆಕಾಂಕ್ಷೆ ಯೋಜನೆ ಜಾತಿಗಣತಿ (caste census) ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸದ್ಯ ಎಲ್ಲೆಡೆ ನೆಟ್‌ವರ್ಕ್ ಸಮಸ್ಯೆ ಉಂಟಾಗಿದೆ.​​ ಪರಿಣಾಮ ಸಮೀಕ್ಷೆ ಬಂದ ಶಿಕ್ಷಕರು ಮೊಬೈಲ್ ನೆಟ್‌ವರ್ಕ್​​ಗಾಗಿ (network) ಮರ ಮತ್ತು ನಿರೀನ ಟ್ಯಾಂಕ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮರ, ನೀರಿನ ಟ್ಯಾಂಕ್ ಏರಿದ ಶಿಕ್ಷಕರು
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮೊಬೈಲ್ ನೆಟ್‌ವರ್ಕ್ ಅನಿವಾರ್ಯ.​​ ಆದರೆ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯಲ್ಲಿ ಬರುವ ಔರಾದ್, ಕಮಲನಹರ, ಬಸವ ಕಲ್ಯಾಣ, ಹುಲಸೂರು ತಾಲೂಕಿನ ಕೆಲವು ಗ್ರಾಮ ಹಾಗೂ ತಾಂಡಾಗಳಲ್ಲಿ ಮೊಬೈಲ್ ನೆಟ್‌ವರ್ಕ್​​ ಸಮಸ್ಯೆ ಉಂಟಾಗಿದೆ. ನೆಟ್‌ವರ್ಕ್​​ಗಾಗಿ ಶಿಕ್ಷಕರು ಮರ ಮತ್ತು ನೀರಿನ ಟ್ಯಾಂಕ್ ಹತ್ತಿದ ಆಶ್ಚರ್ಯಕರ ಸಂಗತಿಗಳು ನಡೆದಿವೆ.

ಸೆಪ್ಟೆಂಬರ್ 22 ರಂದು ಆರಂಭಗೊಂಡಿರುವ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಹಲವು ರೀತಿಯ ತಾಂತ್ರಿಕ ದೋಷದಿಂದ ಆರಂಭದಲ್ಲೇ ವಿಘ್ನ ಶುರುವಾದಂತಾಗಿದೆ. ನೆಟ್‌ವರ್ಕ್, ತರಬೇತಿ ಸೇರಿದಂತೆ ಹಲವು ರೀತಿಯ ಗೊಂದಲಗಳು ಸೃಷ್ಟಿಯಾಗಿವೆ.

ಸದ್ಯ ಜನಗಣತಿ ಆರಂಭಗೊಂಡು ಮೂರು ದಿನಗಳು ಕಳೆದರೂ ಪರಿಹಾರವಿಲ್ಲ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ವೇಗವಾಗಿ ಸರ್ವೆ ಕಾರ್ಯ ನಡೆಯುತ್ತಿಲ್ಲ. ಜಿಲ್ಲೆಯಲ್ಲಿ 3,381 ಜನರಿಂದ ಸರ್ವೆಕಾರ್ಯ ನಡೆಯುತ್ತಿದೆ. ಸುಮಾರು 3.69 ಲಕ್ಷ ಕುಟುಂಬದ ಸಮೀಕ್ಷೆ ಕಾರ್ಯ ನಡೆಯಬೇಕಿದೆ.

ಆರಂಭದಿಂದಲೂ ಧರ್ಮ, ಜಾತಿ, ಆರ್ಥಿಕ ಮಾಹಿತಿ ಯಾವ ರೀತಿ ನೀಡಬೇಕು ಎಂಬ ಗೊಂದಲಕ್ಕೆ ಒಳಗಾದ ಕುಟುಂಬಗಳು ಸೇರಿದಂತೆ ಗಣತಿದಾರರು ಇದೀಗ ನೆಟ್‌ವರ್ಕ್​​ ಸಿಗದೇ ಇರುವುದು ಇನ್ನೊಂದು ವಿಘ್ನ ಎದುರಾಗಿದೆ.


Spread the love
Share:

administrator

Leave a Reply

Your email address will not be published. Required fields are marked *