Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ಕೈವಾಡ: ಶಿಕ್ಷಕನ ವೇಷದಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್!

Spread the love

ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ (Mohammad Yousuf Katari) ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

ಯೂಸೂಫ್‌ ಕಟಾರಿ ಯಾರು?
ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್‌ ಎ ತೈಬಾ (LTE) ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಅನ್ನೋದು ಗೊತ್ತಾಗಿದೆ.

ಪಹಲ್ಗಾಮ್‌ ಉಗ್ರರನ್ನ ಕೆಲ ದಿನಗಳ ಹಿಂದೆ ನಡೆದ ಆಪರೇಷನ್‌ ಮಹಾದೇವ್‌ (Operation Mahadev) ಕಾರ್ಯಾಚರಣೆಯಲ್ಲಿ ಚಿನಾರ್‌ ಕಾರ್ಪ್ಸ್‌ ಬೆಟಾಲಿಯನ್‌ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನ ಬಂಧಿಸಲಾಗಿದೆ.

ಆಪರೇಷನ್‌ ಮಹಾದೇವ್‌ನಲ್ಲಿ ಮಾಸ್ಟರ್‌ ಮೈಂಡ್‌ ಹತ್ಯೆ
ಮೇ 22ರಿಂದ 2-3 ವಾರಗಳ ಕಾಲ ಸತತವಾಗಿ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರನ್ನ ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-47 ರೈಫಲ್‌ ಹಾಗೂ M-9 ಅಸಾಲ್ಟ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನ ಪಹಲ್ಗಾಮ್‌ ದಾಳಿಯಲ್ಲಿ ಬಖಲೆ ಮಾಡಲಾಗಿದೆ ಅನ್ನೋದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಯಿತು.


Spread the love
Share:

administrator

Leave a Reply

Your email address will not be published. Required fields are marked *