Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ತಾಯಿ-ಮಗಳ ಆತ್ಮಹತ್ಯೆ! ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ

Spread the love

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್​ನೋಟ್ ಬರೆದಿಟ್ಟಿದ್ದು, ಡೆತ್​ನೋಟ್​ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ನು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾರೆ. ಇನ್ನು ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಆ ಕಂದ ಬಚಾವ್ ಆಗಿದೆ. ಒಂದು ವೇಳೆ ಆ ಪಾಪು ಸಹ ಮನೆಯಲ್ಲಿದ್ದರೆ ಆ ಮಗುವನ್ನು ಕೊಲ್ಲುತ್ತಿದ್ದಳು. ಆದ್ರೆ, ಅದೃಷ್ಟವಶಾತ್ ಆ ಮಗು ಬಚಾವ್ ಆಗಿದೆ.

ಡೆತ್ ನೋಟ್ ಬರೆದಿಟ್ಟು ಪತಿ ವಿವಾಹೇತರ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ಶ್ರುತಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನು ತಾಯಿ ಮಗಳ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *