Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪತ್ನಿಯನ್ನು ಕೊಂದ ನಂತರ ಪತಿ ಆತ್ಮಹತ್ಯೆ: ಗುರುಗ್ರಾಮದಲ್ಲಿ ಐಟಿ ದಂಪತಿಯ ದುರಂತ ಅಂತ್ಯ

Spread the love

ಗುರುಗ್ರಾಮ: ಸಾಫ್ಟ್‌ವೇರ್‌ ಇಂಜಿನಿಯರ್ ಒಬ್ಬ ತನ್ನ ಪತ್ನಿಯೊಂದಿಗೆ ಜಗಳವಾಡಿ ಆಕೆಯನ್ನು ಕತ್ತು ಹಿಸುಕಿ ಕೊಂದು ಸ್ನೇಹಿತನಿಗೆ ವಿಷಯ ತಿಳಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಅಜಯ್ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಕುಮಾರ್ ಅವರ ಸ್ನೇಹಿತನಿಂದ ಕರೆ ಬಂದಿದ್ದು, ಮಧ್ಯಾಹ್ನ 3.15 ಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಕಳುಹಿಸಿದ್ದೇನೆ ಎಂದು ಹೇಳಿದ್ದಾನೆ. ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಆಕೆಯ ಕುತ್ತಿಗೆಗೆ ಸ್ಕಾರ್ಫ್ನಿಂದ ಬಿಗಿದು ಕೊಲ್ಲಲಾಗಿತ್ತು. ಇನ್ನು ಅಜಯ್ ಕುಮಾರ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಮಾರ್ ತನ್ನ ಪತ್ನಿಯನ್ನು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಇನ್ನು ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಮಹಿಳೆಯ ಕುಟುಂಬವು ಕುಮಾರ್ ವಿರುದ್ಧ ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದೆ.


Spread the love
Share:

administrator

Leave a Reply

Your email address will not be published. Required fields are marked *