Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿನಿಮಾ ಸ್ಟೈಲ್‌ನಲ್ಲಿ ವಿಮೆ ಹಣಕ್ಕಾಗಿ ಕೊಲೆ: ಬಳ್ಳಾರಿಯಲ್ಲಿ ಅನಾಥರ ಹೆಸರಿನಲ್ಲಿ ಕೋಟಿ ವಿಮೆ ಮಾಡಿಸಿದ ಜಾಲ ಭೇದಿಸಿದ ಹೊಸಪೇಟೆ ಪೊಲೀಸರು

Spread the love

ಬಳ್ಳಾರಿ: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಈ ಗ್ಯಾಂಗ್​ ಬಿಂಬಿಸುತ್ತಿತ್ತು ಎಂಬ ಆಘಾತಕಾರಿ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಓರ್ವ ಮಹಿಳೆ ಸೇರಿ 6 ಜನರನ್ನ ಅರೆಸ್ಟ್​ ಮಾಡಲಾಗಿದೆ.

ಕಳೆದ ತಿಂಗಳ ಸೆಪ್ಟೆಂಬರ್​ 28ರಂದು ಸಂಜೆ 6 ಗಂಟೆ ಸುಮಾರಿಗೆ ಸಂಡೂರು ರಸ್ತೆಯ ಎಚ್‌ಎಲ್‌ಸಿ ಕೆನಾಲ್ ಬಳಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಕೌಲ್‌ಪೇಟೆ ನಿವಾಸಿ ಗಂಗಾಧರ ಕೆ. ಎಂಬುವವರು ಮೃತಪಟ್ಟಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂಚಾರಿ ಠಾಣೆ ಪೊಲೀಸರು, ಮೋಟರ್​ ಸೈಕಲ್​ ಬಿದ್ದಿದ್ದು ಸೇರಿ ಹಲವು ಅಂಶಗಳನ್ನ ಗಮನಿಸಿ ಇದು ಕೊಲೆಯಾಗಿರಬಹುದು ಎಂದು ಅನುಮಾನಿಸಿದ್ದರು. ಮೃತನ ಗುರುತು ಪತ್ತೆಯಾಗುತ್ತಿದ್ದಂತೆ ಆತನ ಪತ್ನಿ ಶಾರದಾಳನ್ನ ಕರೆಸಿ ಈ ಬಗ್ಗೆ ವಿಚಾರಣೆ ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ ಶಾರದಾ, ಗಂಗಾಧರ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ರೋಗಿಯಾಗಿದ್ದರು. ನಡೆದಾಡಲೂ ಕಷ್ಟ ಎಂಬ ಸ್ಥಿತಿಯಲ್ಲಿದ್ದ ಅವರು, ಮೋಟರ್​ ಸೈಕಲ್ ಓಡಿಸುವುದಾದರೂ ಹೇಗೆ? ಅವರ ಬಳಿ ದ್ವಿಚಕ್ರ ವಾಹನವೇ ಇಲ್ಲ ಎಂಬ ವಿಷಯ ತಿಳಿಸಿದ್ದಾರೆ. ಈ ವೇಳೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಖತರ್ನಾಕ್​ ಪ್ಲ್ಯಾನ್​

ಇದೊಂದು ಕೊಲೆ ಎಂದು ಗೊತ್ತಾಗುತ್ತಿದ್ದಂತೆ ಪ್ರಕರಣದ ಬೆನ್ನತ್ತಿದ ಪೊಲೀಸರು 6 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿ ಕೃಷ್ಣಪ್ಪ, ಹೊಸಲಿಂಗಾಪುರದ ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಿವಾಸಿಗಳಾದ ಅಜಯ್, ರಿಯಾಜ್, ಯೋಗರಾಜ್ ಸಿಂಗ್, ಹಾಗೂ ಹುಲಿಗೆಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಗಂಗಾಧರ್​ ಗೆ 5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಮಾಡಿಸಿದ್ದ ಗ್ಯಾಂಗ್​, ನಾಮಿನ ಹಣ ಪಡೆಯಲು ರಿಜಿಸ್ಟರ್​ ಮ್ಯಾರೇಜ್​ ನ ನಕಲಿ ದಾಖಲೆಯನ್ನೂ ಸೃಷ್ಟಿ ಮಾಡಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *