Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಾತಿಗಣತಿ ಸರ್ವೇಯಲ್ಲಿ ಭಾರೀ ಯಡವಟ್ಟು: ಹಿಂದೂ ವ್ಯಕ್ತಿಯ ಆಧಾರ್ ನಮೂದಿಸಿದರೆ ಮುಸ್ಲಿಂ ಹೆಸರುಗಳು ಪ್ರತ್ಯಕ್ಷ!

Spread the love

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯ (Caste Census) ತಾಂತ್ರಿಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಾವಣಗೆರೆಯಲ್ಲಿ (Davanagere) ಒಂದು ಕಡೆ ಭಾರೀ ಯಡವಟ್ಟಾಗಿದ್ದು, ಸಮೀಕ್ಷೆ ವೇಳೆ ಶಿಕ್ಷಕರು ಹಿಂದೂ ವ್ಯಕ್ತಿಯೊಬ್ಬರ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ವ್ಯಕ್ತಿಗಳ ಹೆಸರು ಬರುತ್ತಿದೆ.

ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಸಮೀಕ್ಷೆ ಮಾಡುವಾಗ ಈ ರೀತಿ ಯಡವಟ್ಟಾಗಿದೆ. ವೈದ್ಯರಾದ ಹರ್ಷ ಎಂಬವರ ಮನೆಗೆ ಗಣತಿಗೆ ತೆರಳಿದ್ದಾಗ ಅವರ ಆಧಾರ್‌ ನಂಬರ್ ಹಾಕಿದ್ರೆ ಅಪೋರೀಜಾ, ಶರೀಪ್ ಬಾನು ಎಂಬ ಹೆಸರುಗಳನ್ನು ತೋರಿಸುತ್ತಿದೆ. ಇದರಿಂದ ಇದರಿಂದ ಸಮೀಕ್ಷೆಗೆ ಬಂದ ಶಿಕ್ಷಕರಲ್ಲಿ ಗೊಂದಲ ಉಂಟಾಗಿದೆ. ಅಲ್ಲದೇ ಮನೆಯ ಸದಸ್ಯರು ಇದರಿಂದ ಗೊಂದಲಕ್ಕೊಳಗಾಗಿದ್ದಾರೆ. 

ಕೊನೆಗೆ ಮನೆಯ ಸದಸ್ಯರ ಒಂದೊಂದೇ ಹೆಸರು ನಮೋದಿಸಿಕೊಂಡು ಶಿಕ್ಷಕರು ಗಣತಿಯನ್ನು ಮುಗಿಸಿಕೊಂಡು ಹೋಗಿದ್ದಾರೆ. ಸಮೀಕ್ಷೆ ವೇಳೆ ಆದ ಯಡವಟ್ಟನ್ನು ಹರ್ಷ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹೆಸರುಗಳನ್ನು ಡಿಲೀಟ್ ಮಾಡಿಸಿ ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *