Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೋಹಿತ್ ಶರ್ಮಾ ಸಿಕ್ಸರ್‌ಗೆ ಸ್ವತಃ ಅವರ ಐಷಾರಾಮಿ ಕಾರೇ ಬಲಿ!

Spread the love

ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ, ಇಲ್ಲಿನ ಐತಿಹಾಸಿಕ ಶಿವಾಜಿ ಪಾರ್ಕ್ ಮೈದಾನದಲ್ಲಿ ಅಭ್ಯಾಸ ನಡೆಸಿದರು. ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡರೂ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಅವರನ್ನು ಆರಂಭಿಕ ಆಟಗಾರನಾಗಿ ಉಳಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ 19ರಂದು ಪರ್ತ್‌ನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭ್‌ಮನ್ ಗಿಲ್ ನಾಯಕರಾಗಿ ನೇಮಕವಾಗಿದ್ದು, ಶ್ರೇಯಸ್ ಅಯ್ಯರ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

ತಮ್ಮದೇ ಕಾರಿಗೆ ಹೊಡೆದ ರೋಹಿತ್ ಶರ್ಮಾ

ಇನ್ನು ಚಾಂಪಿಯನ್ಸ್ ಟ್ರೋಫಿ ಬಳಿಕ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ರೆಡಿಯಾಗಿರುವ ರೋಹಿತ್ ಶರ್ಮಾ, ಶಿವಾಜಿ ಪಾರ್ಕ್‌ನಲ್ಲಿ ಭರ್ಜರಿಯಾಗಿ ಅಭ್ಯಾಸ ನಡೆಸಿದ್ದಾರೆ. ಈ ವೇಳೆ ಬೌಲರ್‌ಗಳ ಚೆಂಡನ್ನು ನಾನಾ ದಿಕ್ಕುಗಳಿಗೆ ಅಟ್ಟಿದರು. ರೋಹಿತ್ ಶರ್ಮಾ ಆಕರ್ಷಕ ಕವರ್‌ ಡ್ರೈವ್ ಹಾಗೂ ಸ್ವೀಪ್ ಶಾಟ್‌ ಬಾರಿಸುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು. ಈ ವೇಳೆ ರೋಹಿತ್ ಶರ್ಮಾ ಬಾರಿಸಿದ ಸಿಕ್ಸರ್‌ವೊಂದು ಅವರ ಐಶಾರಾಮಿ ಕಾರಿಗೆ ಅಪ್ಪಳಿಸಿದೆ ಎಂದು ವರದಿಯಾಗಿದೆ. ಈ ಕುರಿತಂತೆ ರೋಹಿತ್ ಶರ್ಮಾ ಬ್ಯಾಟಿಂಗ್ ಪ್ರಾಕ್ಟೀಸ್ ವಿಡಿಯೋ ಮಾಡುತ್ತಿದ್ದ ಅಭಿಮಾನಿಯೊಬ್ಬ, ತಮ್ಮದೇ ಕಾರು ಒಡೆದುಕೊಂಡರಲ್ಲ ಎಂದು ಹೇಳುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರೋಹಿತ್ ಶರ್ಮಾಗೆ ಬಾಡಿ ಗಾರ್ಡ್ ಆದ ಅಭಿಷೇಕ್ ನಾಯರ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಮುಂಬೈನಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಇಳಿದಿದ್ದ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾರನ್ನು ಅಭಿಮಾನಿಗಳು ಸುತ್ತುವರೆದಿದ್ದಾರೆ. ಅಭ್ಯಾಸ ಮುಗಿಸಿ ವಾಪಸಾಗುತ್ತಿದ್ದ ರೋಹಿತ್‌ಗಾಗಿ ನೂರಾರು ಅಭಿಮಾನಿಗಳು ಶಿವಾಜಿ ಪಾರ್ಕ್‌ನ ಹೊರಗೆ ಕಾಯುತ್ತಿದ್ದರು. ಟೀಂ ಇಂಡಿಯಾದ ಮಾಜಿ ಸಹಾಯಕ ಕೋಚ್ ಅಭಿಷೇಕ್ ನಾಯರ್, ರೋಹಿತ್‌ಗಿಂತ ಮೊದಲು ಮೈದಾನದಿಂದ ಹೊರಬಂದರು.

ಹೊರಗಡೆ ಸೇರಿದ್ದ ಅಭಿಮಾನಿಗಳ ಗುಂಪನ್ನು ನೋಡಿದ ಅಭಿಷೇಕ್ ನಾಯರ್, ನಾವೆಲ್ಲರೂ ರೋಹಿತ್ ಅಭಿಮಾನಿಗಳೇ, ಆದರೆ ಅವರು ತಮ್ಮ ಕಾರಿನ ಬಳಿ ಸುರಕ್ಷಿತವಾಗಿ ಹೋಗಲು ದಾರಿ ಮಾಡಿಕೊಡಬೇಕು, ಯಾರೂ ಅವರನ್ನು ತಳ್ಳಬಾರದು ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು. ಇದರ ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಜೊತೆ ರೋಹಿತ್ ಬಂದಾಗ, ಅವರನ್ನು ನೋಡಲು ಜನಸಮೂಹ ನೂಕುನುಗ್ಗಲು ಉಂಟಾಯಿತು. ಆದರೂ ಭದ್ರತಾ ಸಿಬ್ಬಂದಿ ಕಷ್ಟಪಟ್ಟು ರೋಹಿತ್ ಅವರನ್ನು ಕಾರಿನ ಬಳಿ ತಲುಪಿಸಿದರು.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಭಿಷೇಕ್ ನಾಯರ್ ಜೊತೆ ಸುಮಾರು ಎರಡು ಗಂಟೆಗಳ ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸಿದ ನಂತರ ರೋಹಿತ್ ವಾಪಸಾದರು. ಮುಂಬೈ ಆಟಗಾರ ಅಂಗ್‌ಕೃಷ್ ರಘುವಂಶಿ ಸೇರಿದಂತೆ ಹಲವು ಆಟಗಾರರು ಶಿವಾಜಿ ಪಾರ್ಕ್‌ನಲ್ಲಿ ರೋಹಿತ್ ಜೊತೆ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರು.

ಚಾಂಪಿಯನ್ಸ್ ಟ್ರೋಫಿ ಬಳಿಕ ಮೊದಲ ಬಾರಿ ಭಾರತ ಪರ ರೋಹಿತ್ ಕಣಕ್ಕೆ

ಈ ವರ್ಷದ ಆರಂಭದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಕೊನೆಯ ಬಾರಿಗೆ ಭಾರತ ಪರ ಆಡಿದ್ದರು. ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡದ ನಾಯಕರಾಗಿದ್ದ ರೋಹಿತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಶುಭಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕರನ್ನಾಗಿ ನೇಮಿಸಿತ್ತು. ಇತ್ತೀಚೆಗೆ ರೋಹಿತ್ 10 ಕೆಜಿ ತೂಕ ಇಳಿಸಿಕೊಂಡು ಹೆಚ್ಚು ಫಿಟ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿದ್ದವು. ರೋಹಿತ್ ಶರ್ಮಾ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೂ ಭಾರತ ತಂಡದ ಭಾಗವಾಗಿರುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.


Spread the love
Share:

administrator

Leave a Reply

Your email address will not be published. Required fields are marked *