Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ಹೊರವಲಯದ ಮೇಡಹಳ್ಳಿಯಲ್ಲಿ ದುರಂತ: ಕ್ರೇನ್ ರಿಪೇರಿ ವೇಳೆ ತುಂಡಾಗಿ ಬಿದ್ದು ಐವರು ಕಾರ್ಮಿಕರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

Spread the love

ಬೆಂಗಳೂರು: ರಿಪೇರಿ ಮಾಡುತ್ತಿದ್ದ ವೇಳೆ ಕ್ರೇನ್ (Crane) ತುಂಡಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಮೇಡಹಳ್ಳಿ (Medahalli ) ಬಳಿ ನಡೆದಿದೆ.

ಎಎಸ್ ಕ್ರೇನ್ ಸರ್ವೀಸ್ ವತಿಯಿಂದ ಅವಘಡ ಉಂಟಾಗಿದೆ. ಖಾಸಗಿ, ಜನ ವಸತಿ ಪ್ರದೇಶದಲ್ಲಿ ಕ್ರೇನ್ ರಿಪೇರಿ ಜಾಗವಿದ್ದು, ಕ್ರೇನ್ ರಿಪೇರಿ ಮಾಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೂಲೂ (30), ಕರ್ಬನ್ (19), ಇಲ್ಲಾಜ್ (38), ಸಮೀರ್ (28), ಶಾಮದೇವ್ (52) ಗಾಯಾಳುಗಳು.

ಜನವಸತಿ ಪ್ರದೇಶದಲ್ಲಿ ಕ್ರೇನ್ ಸರ್ವಿಸ್ ಕಾರ್ಯ ಆರಂಭಿಸಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹಲವು ಬಾರಿ ಪೊಲೀಸ್ ಠಾಣೆಗೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *