Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿವಮೊಗ್ಗ ಕೇಂದ್ರ ಜೈಲಿನಲ್ಲಿ ಭದ್ರತಾ ಲೋಪ ಯತ್ನ: ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಕಳ್ಳಸಾಗಣೆಗೆ ಯತ್ನಿಸಿದ ಇಬ್ಬರು ಯುವಕರು ಬಂಧನ!

Spread the love

ಶಿವಮೊಗ್ಗ: ಇಲ್ಲಿನ (Shivamogga) ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ.

ಬಂಧಿತರನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ಸಂಜೆ 4:30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಈ ಇಬ್ಬರು ಯುವಕರು ಮೂರು ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ, ಕಪ್ಪು ಗಮ್ ಟೇಪ್‌ನಲ್ಲಿ ಸುತ್ತಿದ ವಸ್ತುಗಳು ಪತ್ತೆಯಾದವು. ತಪಾಸಣೆ ಮಾಡಿದಾಗ ಅವುಗಳಲ್ಲಿ 1 ಗಾಂಜಾ ಪ್ಯಾಕೆಟ್ ಮತ್ತು 2 ಸಿಗರೇಟ್ ಪ್ಯಾಕೆಟ್‌ಗಳು ಇರುವುದು ದೃಢಪಟ್ಟಿದೆ. 

ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೇಂದ್ರ ಜೈಲು ಅಧೀಕ್ಷಕ ಡಾ.ರಂಗನಾಥ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *