Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರಾರ್ಥನೆ ಮುಗಿಸಿ ಬಿಸಿ ಹಾಲಿಗೆ ನಿಂತಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

Spread the love

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ (ViratPete City) ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.

ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌ ಮುಗಿಸಿ, ಬಿಸಿಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಸಮೀಪದ ತೋಟದಿಂದ ಹಾರಿಬಂದ ಹೆಜ್ಜೇನು ಹಿಂಡು ದಾಳಿ (Honey Bees Attack) ನಡೆಸಿವೆ. ಮಕ್ಕಳು, ಶಾಲಾ ಶಿಕ್ಷಕರ ಮೇಲೆ ದಾಳಿಯಾಗಿದೆ. ಮಕ್ಕಳು ಚೀರಾಡುತ್ತಿದ್ದ ಶಬ್ಧ ಕೇಳಿಸುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಜೇನು ಓಡಿಸಿ ಮಕ್ಕಳನ್ನ ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಮುಖ್ಯಶಿಕ್ಷಕಿ ಅನ್ನಮ್ಮ ಅವರೂ ಹೆಜ್ಜೇನು ದಾಳಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಿಗೆ ಯಾವುದೇ ತೊಂದರೆಗಳಿಲ್ಲ ಎಂದು ವೈದ್ಯರು ತಿಳಿಸಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ.

ಘಟನೆ ಬಳಿಕ ವಿರಾಜಪೇಟೆ ನಗರಠಾಣೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *