Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೇರಳದಲ್ಲಿ ದೆವ್ವದ ಹೆಸರಿನಲ್ಲಿ ವಿಕೃತಿ: ಮಹಿಳೆಗೆ ಬೀಡಿ ಸೇದಿಸಿ, ಬಲವಂತವಾಗಿ ಮದ್ಯ ಕುಡಿಸಿ, ದೈಹಿಕ ಚಿತ್ರಹಿಂಸೆ ನೀಡಿದ ಮಾಂತ್ರಿಕ

Spread the love

ತಿರುವನಂತಪುರಂ: ದೆವ್ವ ಬಿಡಿಸೋಕೆ ಮಹಿಳೆಗೆ ಬೀಡಿ ಸೇದಿ, ಮದ್ಯ ಸೇವಿಸುವಂತೆ ಗಂಟೆಗಟ್ಟಲೇ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವ ಘಟನೆ ಕೇರಳದ (Kerala) ಕೊಟ್ಟಾಯಂನಲ್ಲಿ (Kottayam) ನಡೆದಿದೆ.

ಪ್ರಕರಣ ಸಂಬಂಧ ಮಹಿಳೆಯ ಪತಿ ಅಖಿಲ್ ದಾಸ್ (26), ಪತಿಯ ತಂದೆ ದಾಸ್ (54) ಹಾಗೂ ಮಾಂತ್ರಿಕ ಶಿವದಾಸ್ (54) ಮೂವರನ್ನು ಬಂಧಿಸಲಾಗಿದೆ

ಪೊಲೀಸರ ಮಾಹಿತಿ ಪ್ರಕಾರ, ಕಳೆದ ವಾರ ಮಹಿಳೆಯ ಅತ್ತೆ ಮಾಂತ್ರಿಕನ ಬಳಿ ಹೋಗಿ ತಮ್ಮ ಸೊಸೆಯ ಮೇಲೆ ಮೃತ ಸಂಬಂಧಿಕರ ದೆವ್ವ ಆವರಿಸಿಕೊಂಡಿದೆ ಎಂದು ತಿಳಿಸಿ, ಮಾಟಮಂತ್ರಕ್ಕೆ ವ್ಯವಸ್ಥೆ ಮಾಡಿಸಿದ್ದರು. ಅದರಂತೆ ಬೆಳಗ್ಗೆ 11 ಗಂಟೆಗೆ ಮಾಟಮಂತ್ರ ಆರಂಭವಾಗಿ ರಾತ್ರಿಯವರೆಗೆ ನಡೆದಿದೆ ಎಂದು ತಿಳಿಸಿದ್ದಾರೆ.

ಇನ್ನೂ ಈ ಕುರಿತು ಮಹಿಳೆ ಮಾತನಾಡಿ, ಮಾಟಮಂತ್ರ ಮಾಡುವಾಗ ನನಗೆ ಬಲವಂತವಾಗಿ ಮದ್ಯ ಕುಡಿಸಿದರು, ಜೊತೆಗೆ ಬೀಡಿ ಸೇದಿಸಿದರು. ಬೂದಿಯನ್ನು ತಿನ್ನಿಸಿದರು. ನನ್ನ ಮೇಲೆ ಸುಟ್ಟ ಗಾಯಗಳನ್ನು ಮಾಡಿ, ದೈಹಿಕವಾಗಿ ಚಿತ್ರಹಿಂಸೆ ನೀಡಿದರು. ಕೊನೆಗೆ ನಾನು ಪ್ರಜ್ಞೆ ಕಳೆದುಕೊಂಡೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಹಿಳೆಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿ ಮಾಂತ್ರಿಕ ಫೋನ್ ಸ್ವಿಚ್ ಆಫ್ ಮಾಡಿ, ಪರಾರಿಯಾಗಿದ್ದ. ಕೊನೆಗೆ ಮಾಂತ್ರಿಕನನ್ನು ಪೊಲೀಸರು ತಿರುವಲ್ಲಾದ ಮುತ್ತೂರು ಪ್ರದೇಶದಲ್ಲಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಮಹಿಳೆಯ ಅತ್ತೆ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರೆದಿದೆ.


Spread the love
Share:

administrator

Leave a Reply

Your email address will not be published. Required fields are marked *