Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ –ಫರಂಗಿಪೇಟೆಯಲ್ಲಿ ತೀವ್ರ ಪ್ರತಿಭಟನೆ

Spread the love

ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ; ಫರಂಗಿಪೇಟೆಯಲ್ಲಿ ಸರ್ವಧರ್ಮೀಯರಿಂದ ಪ್ರತಿಭಟನೆ, ವ್ಯಾಪಾರ ಮಳಿಗೆ ಬಂದ್.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಢ ನಾಪತ್ತೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಬಾಲಕ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಲು ಫರಂಗಿಪೇಟೆ ಜಂಕ್ಷನ್‌ನಲ್ಲಿ ಇಂದು (ಮಾ.1) ಪ್ರತಿಭಟನೆ ನಡೆಸಲಾಯಿತು. ಕೆಲಕಾಲ ಪೇಟೆ ಬಂದ್ ಮಾಡಿ ಬಾಲಕನ ಪತ್ತೆಗೆ ಒತ್ತಾಯ ಮಾಡಲಾಯಿತು. ಈ ಸಂದರ್ಭ ಜಾತಿ, ಮತ, ಧರ್ಮದ ಚೌಕಟ್ಟು ಮೀರಿ ಸರ್ವ ಧರ್ಮೀಯರು ಪ್ರತಿಭಟನೆಯಲ್ಲಿ ಭಾಗಿಯಾದರು. ಅಂಗಡಿ-ಮಳಿಗೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಎಸ್‌ಪಿ ಯತೀಶ್ ಕುಮಾರ್ ಪ್ರತಿಕ್ರಿಯೆ
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಾತನಾಡಿ, ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕ್ಲಿಷ್ಟಕರವಾದ ಪ್ರಕರಣಗಳಿಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಜಿಲ್ಲೆಯ ವಿವಿಧ ಠಾಣೆಯ ನುರಿತ ಪೊಲೀಸರನ್ನು ಕರೆಸಿ ತನಿಖೆ ಹೆಚ್ಚಿಸಿದ್ದೇವೆ. ದಿಗಂತ್ ಪತ್ತೆಯಾಗುವವರೆಗೆ ನಾವು ಸುಮ್ಮನೆ ಕೂರುವುದಿಲ್ಲ. ನಿಮ್ಮಲ್ಲಿ ಮಾಹಿತಿ ಇದ್ದರೆ ನಮ್ಮ ಜೊತೆ ಹಂಚಿಕೊಳ್ಳಿ. ತನಿಖೆ ಮುಂದುವರೆಸಲು ನಿಮ್ಮ ಸಹಕಾರ ಇರಲಿ ಎಂದರು.

ಸಂಸದ, ಶಾಸಕರ ಭೇಟಿ
ಪ್ರತಿಭಟನಾ ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಗಾಂಜಾ ವಿರುದ್ಧ ಪೊಲೀಸರು ತನಿಖೆ ಮುಂದುವರಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ. ಪೊಲೀಸರು ಸದೃಢ ತನಿಖೆ ನಡೆಸಬೇಕು ಎಂದು ತಿಳಿಸಿದರು.

ಗಾಂಜಾ ವಿರುದ್ಧ ಕೂಗು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, ಹಿಂದೂ ಸಂಘಟನೆಯವರು ಪ್ರತಿಬಾರಿ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ರೀತಿ ಮಾಡಬೇಡಿ. ಹಿಂದೂ ಸಮಾಜವನ್ನು ಕೆಣಕುವ ಕೆಲಸ ಮಾಡಬೇಡಿ ಎಂದು ಹೇಳಿದರು. ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡುವ ಬಗ್ಗೆ ಭರವಸೆ ನೀಡಿದರು. ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಸಮಾಜದ್ರೋಹಿ ಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಾಗಿದೆ. ಮಹಿಳೆಯರೂ ನಡೆದಾಡಲು ಸಾಧ್ಯವಾಗದಂಥ ಪರಿಸ್ಥಿತಿ ಇಲ್ಲಿದೆ ಎಂದರು.
ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿ, ಬಾಲಕನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಆ ಸಮಯದಲ್ಲಿ ಸಕ್ರಿಯರಾಗಿ ಕೆಲಸ ಮಾಡಬೇಕಿತ್ತು. ಜಿಲ್ಲೆಯಾದ್ಯಂತ ಗಾಂಜಾ ಮಾಫಿಯಾ ಮಿತಿ ಮೀರಿದೆ ಎಂದರು.

ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಎರಡು ದಿನಗಳಲ್ಲಿ ಬಾಲಕನ ನಾಪತ್ತೆ ಪ್ರಕರಣ ಭೇದಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ ತೇವು, ನಂದನ್ ಮಲ್ಯ, ಮನೋಜ್ ಆಚಾರ್ಯ ಮತ್ತಿತರರ ಜೊತೆ ಫರಂಗಿಪೇಟೆಯ ಸರ್ವಧರ್ಮೀಯ ಮುಖಂಡರೂ ಪ್ರತಿಭಟನೆಗೆ ಕೈಜೋಡಿಸಿದರು. ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್ (17), ಫೆ. 25ರಂದು ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು


Spread the love
Share:

administrator

Leave a Reply

Your email address will not be published. Required fields are marked *