Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಅಭಿವೃದ್ಧಿ: ಪ್ರಸಾದ್ ಯೋಜನೆಗೆ ಪ್ರಸ್ತಾವನೆ ಅನುಮೋದನೆಯಲ್ಲಿಲ್ಲ – ಕೇಂದ್ರ ಸಚಿವ ಸ್ಪಷ್ಟನೆ

Spread the love

ನವದೆಹಲಿ: ಕರ್ನಾಟಕದ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ (Puttur Shree Mahalingeshwara Temple) ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಸಾದ್ ಯೋಜನೆಯಡಿ (PRASHAD Scheme) ಅನುಮೋದನೆಗಾಗಿ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ  ಗಜೇಂದ್ರಸಿಂಗ್‌ ಶೇಖಾವತ್‌(Gajendra Singh Shekhawat) ಹೇಳಿದ್ದಾರೆ.

ಲೋಕಸಭೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ (Brijesh Chowta) ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ಪ್ರವಾಸೋದ್ಯಮ ಯೋಜನೆಗಳಿಗೆ ಆರ್ಥಿಕ ಸಹಾಯಕ್ಕಾಗಿ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸುತ್ತವೆ. ಸ್ವೀಕರಿಸಿದ ಪ್ರಸ್ತಾವನೆಗಳನ್ನು ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಮೌಲ್ಯಮಾಪನ ಮಾಡಲಾಗುತ್ತದೆ ಮತ್ತು ನಿರ್ದಿಷ್ಟ ಮಾನದಂಡಗಳನ್ನು ಪೂರೈಸಿದರೆ ಮತ್ತು ಹಣ ಲಭ್ಯವಿದ್ದರೆ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. 

ಪ್ರವಾಸಿ ತಾಣಗಳು ಮತ್ತು ಉತ್ಪನ್ನಗಳ ಅಭಿವೃದ್ಧಿಯನ್ನು ಪ್ರಾಥಮಿಕವಾಗಿ ಆಯಾ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ಕೈಗೊಳ್ಳುತ್ತವೆ. ಆದಾಗ್ಯೂ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳೊಂದಿಗೆ ಸಮಾಲೋಚಿಸಿ, ವಿವಿಧ ಯೋಜನೆಗಳು ಮತ್ತು ಉಪಕ್ರಮಗಳ ಮೂಲಕ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮೂಲಕ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪ್ರಯತ್ನಗಳನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಬೀದರ್‌ ನ ಪಾಪನಾಶ ದೇವಸ್ಥಾನಗಳಲ್ಲಿ ಪ್ರಸಾದ್‌ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಯಾವ ದೇವಸ್ಥಾನಕ್ಕೆ ಎಷ್ಟು ಕೋಟಿ ಅನುದಾನ?
ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು: 2023 – 24 ರಲ್ಲಿ 45.38 ಕೋಟಿ ರೂ. ಮಂಜೂರಾಗಿದ್ದು 13.33 ಕೋಟಿ ರೂ. ಬಿಡುಗಡೆಯಾಗಿದೆ.
ರೇಣುಕಾ ಯಲ್ಲಮ್ಮ ದೇವಸ್ಥಾನ, ಸವದತ್ತಿ – 2024 – 25 ರಲ್ಲಿ 18.37 ಕೋಟಿ ರೂ. ಮಂಜುರಾಗಿದೆ.
ಪಾಪನಾಶ ದೇವಸ್ಥಾನ, ಬೀದರ್‌ – 2024 – 25 ರಲ್ಲಿ 22.25 ಕೋಟಿ ರೂ. ಮಂಜೂರಾಗಿದ್ದು 6.30 ಕೋಟಿ ರೂ. ಬಿಡುಗಡೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *