ಮಂಡ್ಯ: ಗುನ್ನಾಯಕನಹಳ್ಳಿಯ ಕೊಬ್ಬರಿ ಗೋದಾಮಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಭಸ್ಮ.

ಮಂಡ್ಯ : ಜಿಲ್ಲೆಯ ಗುನ್ನಾಯಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಒಂದು ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ದುರ್ಘಟನೆಯು ಮಂಡ್ಯ ತಾಲ್ಲೂಕಿಗೆ ಸೇರಿದ್ದು, ಗ್ರಾಮಸ್ಥರಾದ ಪ್ರಸನ್ನ ಎಂಬುವರಿಗೆ ಸೇರಿದ ಕೊಬ್ಬರಿ ಶೇಖರಣಾ ಶೆಡ್ ಇದಾಗಿದೆ. ಪ್ರಸನ್ನ ಅವರು ಸುತ್ತಮುತ್ತಲಿನ ಗ್ರಾಮಗಳ ರೈತರಿಂದದೊಡ್ಡ ಪ್ರಮಾಣದಲ್ಲಿ ಕೊಬ್ಬರಿಯನ್ನು ಖರೀದಿಸಿ, ಅದನ್ನು ಸಂಗ್ರಹಿಸಿಟ್ಟಿದ್ದರು. ಈ ಅಗ್ನಿ ದುರಂತದಲ್ಲಿ ಸುಮಾರು 16 ಟನ್ ಕೊಬ್ಬರಿ ಮತ್ತು ಅದರೊಂದಿಗೆ 6 ಟನ್ ಗ್ರೌಟ್ ಸಹ ಭಸ್ಮವಾಗಿದೆ ಎಂದು ಅಂದಾಜಿಸಲಾಗಿದೆ.

ಈ ಘಟನೆಯಿಂದಾಗಿ ಮಾಲೀಕರಿಗೆ ಅಂದಾಜು 55 ಲಕ್ಷ ರೂಪಾಯಿ ಮೌಲ್ಯದ ಆರ್ಥಿಕ ನಷ್ಟ ಉಂಟಾಗಿದೆ. ಗೋದಾಮಿಗೆ ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣದ ಬಗ್ಗೆ ತನಿಖೆ ನಡೆಯಬೇಕಿದೆ. ಘಟನೆಯ ಕುರಿತು ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ಮತ್ತಷ್ಟು ಹರಡದಂತೆ ತಡೆಗಟ್ಟಿ, ಅದನ್ನು ಸಂಪೂರ್ಣವಾಗಿ ನಂದಿಸುವ ಕಾರ್ಯದಲ್ಲಿ ತೀವ್ರವಾಗಿ ತೊಡಗಿದ್ದಾರೆ. ಈ ದುರ್ಘಟನೆಯು ಸ್ಥಳೀಯ ರೈತರು ಮತ್ತು ವ್ಯಾಪಾರಿಯ ಮೇಲೆ ತೀವ್ರ ಪರಿಣಾಮ ಬೀರಿದೆ.