Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಸೇವೆ ಪುನರಾರಂಭ

Spread the love

ಮಂಗಳೂರು: ಮಂಗಳೂರು ಬೆಂಗಳೂರು ರೈಲು ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿಯನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ. ಕಳೆದ 6 ತಿಂಗಳಿನಿಂದ ಬಂದ್ ಆಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಸೇವೆ ಮತ್ತೆ ಪ್ರಾರಂಭವಾಗಿದೆ.

ಕರಾವಳಿ ತೀರದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಶ್ರವಣಬೆಳಗೊಳದಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸುದ್ದಿ ನೀಡಿದೆ. ಕಳೆದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಬೆಂಗಳೂರು-ಮಂಗಳೂರು-ಕಾರವಾರ ‘ಗೊಮ್ಮಟೇಶ್ವರ ಎಕ್ಸ್‌ಪ್ರೆಸ್’ (16575/16576) ರೈಲು ಸೇವೆ ಪುನರಾರಂಭಗೊಳ್ಳಲು ಸಿದ್ಧವಾಗಿದೆ. ವಿದ್ಯುದೀಕರಣ ಕಾಮಗಾರಿಗಳಿಂದಾಗಿ ರದ್ದುಗೊಂಡಿದ್ದ ಈ ರೈಲು, ಇನ್ನು ಮುಂದೆ ಯಶವಂತಪುರ ನಿಲ್ದಾಣದಿಂದ ತನ್ನ ನಿಯಮಿತ ಸಂಚಾರವನ್ನು ಮುಂದುವರಿಸಲಿದೆ ಎಂದು ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಪುನರಾರಂಭದ ಜೊತೆಗೆ, ರೈಲ್ವೆ ಇಲಾಖೆಯು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ಗೆ ಮಹತ್ವದ ಸುಧಾರಣೆಗಳನ್ನು ತಂದಿದೆ. ಬೆಳಗಿನ ಸಮಯದಲ್ಲಿ ಸಂಚರಿಸುವ ಈ ರೈಲಿನಲ್ಲಿ ಪ್ರಯಾಣಿಕರು ಪಶ್ಚಿಮ ಘಟ್ಟಗಳ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ನೆರವಾಗುವ ‘ವಿಸ್ಟಾಡೋಮ್ ಕೋಚ್’ ಗಳನ್ನು ಅಳವಡಿಸಲಾಗಿದೆ. ಗಾಜಿನ ಕಿಟಕಿಗಳು ಮತ್ತು ಬೃಹತ್ ಗಾಜಿನ ಮೇಲ್ಚಾವಣಿ ಹೊಂದಿರುವ ಈ ಕೋಚ್‌ಗಳ ಮೂಲಕ ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮತ್ತು ಮಂಗಳೂರು ಮಾರ್ಗದ ಪ್ರಕೃತಿ ನೋಟವನ್ನು ಕಣ್ತುಂಬಿಕೊಳ್ಳಬಹುದು.


ರೈಲಿನ ಸಂಚಾರ ಮಾರ್ಗ ಮತ್ತು ಸಮಯದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಇದು ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಶ್ರವಣಬೆಳಗೊಳ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಮತ್ತು ಬಂಟ್ವಾಳ ಮೂಲಕ ಮಂಗಳೂರು ತಲುಪಲಿದೆ. ಪ್ರಯಾಣಿಕರು ಈ ರೈಲು ಸೇವೆಯನ್ನು ಬಳಸಿಕೊಂಡು ಕರಾವಳಿ ತೀರದ ಪ್ರವಾಸವನ್ನು ಆನಂದಿಸಲು ನೈಋತ್ಯ ರೈಲ್ವೆ ಮನವಿ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *